ಆದಿ ಚುಂಚನಗಿರಿಗೆ ಆಗಮಿಸಲಿದ್ದಾರೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

Published : Nov 28, 2017, 08:35 AM ISTUpdated : Apr 11, 2018, 12:44 PM IST
ಆದಿ ಚುಂಚನಗಿರಿಗೆ  ಆಗಮಿಸಲಿದ್ದಾರೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಸಾರಾಂಶ

ಡಿಸೆಂಬರ್ 10ರಂದು, ಕಾಲ ಭೈರವನ ನವನಾಥ ಸಂಭ್ರಮ ಮತ್ತು ಮಾಲೆ ವೃತದ ಹಿನ್ನೆಲೆಯಲ್ಲಿ ಭೇಟಿ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ. ಶ್ರೀ ಕ್ಷೇತ್ರದ ಪೀಠಾಧ್ಯಕ್ಷರಾಗಿರುವ ನಿರ್ಮಲಾನಂದ ಸ್ವಾಮೀಜಿ ಅವರು  ಯೋಗಿ ಅವರ ಭೇಟಿ ಅಧಿಕೃತಗೊಂಡ ನಂತರವಷ್ಟೇ ತಿಳಿಸುವುದಾಗಿ ಹೇಳಿದ್ದಾರೆ.

ಮಂಡ್ಯ(ನ.28): ಉತ್ತರ ಪ್ರದೇಶದ ಮುಖ್ಯಮಂತ್ರಿ  ಯೋಗಿ ಆದಿತ್ಯನಾಥ್ ಅವರು ಶೀಘ್ರದಲ್ಲೇ ರಾಜ್ಯಕ್ಕೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಇನ್ನೇನು ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಶ್ರೀ ಕ್ಷೇತ್ರ  ಆದಿ ಚುಂಚನಗಿರಿಗೆ ಯೋಗಿ ಅವರು ಭೇಟಿ ನೀಡಲಿದ್ದಾರೆ.   ಬಿಜೆಪಿ ರಾಷ್ಟ್ರಾಧ್ಯಕ್ಷ  ಅಮಿತ್ ಷಾ ಅವರೂ ಕೂಡ ರಾಜ್ಯಕ್ಕೆ ಆಗಮಿಸಿದ್ದ ವೇಳೆ ಶ್ರೀ ಕ್ಷೇತ್ರ ಆದಿ ಚುಂಚನಗಿರಿಗೆ ಭೇಟಿ ನೀಡಿದ್ದರು.  ಇದೀಗ ಇಲ್ಲಿಗೆ ಭೇಟಿ ನೀಡುವುದು ಯೋಗಿ ಆದಿತ್ಯನಾಥ್ ಅವರ ಸರದಿಯಾಗಿದೆ.

ಈ ಬಗ್ಗೆ ಮಂಡ್ಯದಲ್ಲಿ  ಮಾತುಗಳು ಕೇಳಿಬರುತ್ತಿದ್ದು, ಡಿಸೆಂಬರ್ 10ರಂದು, ಕಾಲ ಭೈರವನ ನವನಾಥ ಸಂಭ್ರಮ ಮತ್ತು ಮಾಲೆ ವೃತದ ಹಿನ್ನೆಲೆಯಲ್ಲಿ ಭೇಟಿ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ. ಶ್ರೀ ಕ್ಷೇತ್ರದ ಪೀಠಾಧ್ಯಕ್ಷರಾಗಿರುವ ನಿರ್ಮಲಾನಂದ ಸ್ವಾಮೀಜಿ ಅವರು  ಯೋಗಿ ಅವರ ಭೇಟಿ ಅಧಿಕೃತಗೊಂಡ ನಂತರವಷ್ಟೇ ತಿಳಿಸುವುದಾಗಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕ ರಾಜ್ಯಪಾಲರ ಭಾಷಣ ವಿವಾದಕ್ಕೆ ಟ್ವಿಸ್ಟ್ ಕೊಟ್ಟ ಸಭಾಪತಿ ಬಸವರಾಜ ಹೊರಟ್ಟಿ
ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸುದ್ದಿ