ಅಭಿನಂದನ್‌ ಮೀಸೆಗೆ ರಾಷ್ಟ್ರೀಯ ಮೀಸೆ ಸ್ಥಾನ ಕೊಡಿ: ಕಾಂಗ್ರೆಸ್‌ ಒತ್ತಾಯ

Published : Jun 25, 2019, 08:43 AM IST
ಅಭಿನಂದನ್‌ ಮೀಸೆಗೆ ರಾಷ್ಟ್ರೀಯ ಮೀಸೆ ಸ್ಥಾನ ಕೊಡಿ: ಕಾಂಗ್ರೆಸ್‌ ಒತ್ತಾಯ

ಸಾರಾಂಶ

ಅಭಿನಂದನ್‌ ಮೀಸೆಗೆ ರಾಷ್ಟ್ರೀಯ ಮೀಸೆ ಸ್ಥಾನ ಕೊಡಿ: ಕಾಂಗ್ರೆಸ್‌ ಒತ್ತಾಯ| ಲೋಕಸಭೆಯ ಚರ್ಚೆಯ ವೇಳೆ ಈ ಬೇಡಿಕೆ|

ನವದೆಹಲಿ[ಜೂ.25]: ಭಾರತೀಯ ವಾಯು ಪಡೆಯ ವಿಂಗ್‌ ಕಮಾಂಡರ್‌ ಅಭಿನಂದನ್‌ ವರ್ತಮಾನ್‌ ಅವರ ಮೀಸೆಯನ್ನು ‘ರಾಷ್ಟ್ರೀಯ ಮೀಸೆ’ ಎಂದು ಘೋಷಿಸುವಂತೆ ಲೋಕಸಭೆಯಲ್ಲಿನ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಸೋಮವಾರ ಆಗ್ರಹಿಸಿದ್ದಾರೆ.

ಲೋಕಸಭೆಯ ಚರ್ಚೆಯ ವೇಳೆ ಮತನಾಡಿದ ಚೌಧರಿ, ಈ ಬೇಡಿಕೆ ಇಟ್ಟಿದ್ದಾರೆ. ಅಲ್ಲದೇ, ಪಾಕಿಸ್ತಾನದ ಎಫ್‌- 16 ವಿಮಾನವನ್ನು ಹೊಡೆದುರುಳಿಸಿದ್ದಕ್ಕಾಗಿ ಅಭಿನಂದರ್‌ಗೆ ಪ್ರಶಸ್ತಿ ನೀಡಿ ಗೌರವಿಸಬೇಕು. ಇದರಿಂದ ಭದ್ರತಾ ಪಡೆಗಳ ನೈತಿಕ ಸ್ಥೈರ್ಯ ಹಾಗೂ ಆತ್ಮವಿಶ್ವಾಸ ಹೆಚ್ಚಾಗಲಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಯುದ್ಧ ವಿಮಾನವನ್ನು ಬೆನ್ನಟ್ಟುವಾಗ ಮಿಗ್‌ ವಿಮಾನ ಪತನಗೊಂಡು, ಫೆ.27ರಂದು ಸೆರೆಸಿಕ್ಕಿದ್ದ ಅಭಿನಂದನ್‌, ಮಾ.1ರಂದು ಬಿಡುಗಡೆ ಆಗಿದ್ದರು. ಬಳಿಕ ಅಭಿನಂದನ್‌ ಅವರ ಮೀಸೆ ದೇಶದೆಲ್ಲೆಡೆ ಜನಪ್ರಿಯವಾಗಿತ್ತು. ಅನೇಕ ಮಂದಿ ಅಭಿನಂದನ್‌ ರೀತಿಯಲ್ಲೇ ಮೀಸೆ ಬಿಟ್ಟಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಾಕ್ಸಿಕ್ ಸಿನಿಮಾ ರಿಲೀಸ್ ಸಮೀಪಿಸುತ್ತಿದ್ದಂತೆ ಐಟಿ ಪ್ರಕರಣದಲ್ಲಿ ನಟ ಯಶ್‌ಗೆ ಹೈಕೋರ್ಟ್ ರಿಲೀಫ್
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ