
ನವದೆಹಲಿ (ನ.16): ನೋಟು ನಿಷೇಧವನ್ನು ಖಂಡಿಸಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಮ್ಮ ಪಕ್ಷದ 44 ಶಾಸಕರೊಂದಿಗೆ ಸಂಸತ್ ನಿಂದ ರಾಷ್ಟ್ರಪತಿಭವನದವರೆಗೆ ಪಾದಯಾತ್ರೆ ನಡೆಸಿದರು.
ನೋಟು ನಿಷೇಧವನ್ನು ವಿರೋಧಿಸಿ ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರದ ವಿರುದ್ಧ ಟಿಎಂಸಿ ನಾಯಕರು ರಾಷ್ಟ್ರಪತಿ ಭವನದೆದುರು ಘೋಷಣೆ ಕೂಗಿದರು. ಹಣದ ಅಪಮೌಲ್ಯೀಕರಣವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
“ ಇದನ್ನು ಬಹಳ ವ್ಯವಸ್ಥಿತವಾಗಿ ರೂಪಿಸಲಾಗಿದೆ. ಕಪ್ಪುಹಣವನ್ನು ಹೊರತರಲು ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ. ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ತಡೆ ಹಿಡಿಯಬೇಕು” ಎಂದು ಟಿಎಂಸಿ ವಕ್ತಾರ ಸುದೀಪ್ ಬಂಡೋಪಾಧ್ಯಾಯ ಮಾಧ್ಯಮಕ್ಕೆ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.