
ಬಳ್ಳಾರಿ [ಜೂ.18] : ಮಾನನಷ್ಟಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಹಾಗೂ ಮೊಣಕಾಲ್ಮುರು ಶಾಸಕ ಬಿ. ಶ್ರೀರಾಮುಲು ಇಲ್ಲಿನ ಜೆಎಂಎಫ್ಸಿ ನ್ಯಾಯಲಯಕ್ಕೆ ಸೋಮವಾರ ಹಾಜರಾದರು.
ಈ ಹಿಂದೆ ಜನಾರ್ದನ ರೆಡ್ಡಿ ಸಂಪಾದಕತ್ವದ ದಿನಪತ್ರಿಕೆಯಲ್ಲಿ ಮಾಜಿ ಸಚಿವ ಎಂ. ದಿವಾಕರ ಬಾಬು ವಿರುದ್ಧ ಮಾನ ಹಾನಿಯಾಗುವಂತಹ ವರದಿ ಮಾಡಲಾಗಿದೆ ಎಂದು ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ರೆಡ್ಡಿ ಬಳ್ಳಾರಿಗೆ ಬರದಂತೆ ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಇಷ್ಟುದಿನ ಕೋರ್ಟ್ಗೆ ಹಾಜರಾಗಿರಲಿಲ್ಲ.
ರೆಡ್ಡಿ, ರಾಮುಲು ಸೇರಿ ನಾಲ್ವರ ಹಾಜರಿ ಕುರಿತಂತೆ ಇನ್ನು ಮುಂದೆ ಪ್ರಕರಣ ಬೆಂಗಳೂರು ಕೋರ್ಟ್ಗೆ ಸ್ಥಳಾಂತರಿಸಲಾಯಿತು. ಈ ಕುರಿತು ಪ್ರತಿಕ್ರಿಯಿಸಿದ ಜನಾರ್ದನ ರೆಡ್ಡಿ, ಇದೊಂದು ಪ್ರಕರಣ ಕೋರ್ಟಿನಲ್ಲಿತ್ತು. ಕೋರ್ಟ್ ಆದೇಶ ಹಿನ್ನೆಲೆ ಹಾಜರಾಗಿದ್ದೇನೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.