
ನವದೆಹಲಿ: ಆಪ್ ನಾಯಕ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೆಸರಲ್ಲಿ ದೆಹಲಿ ಬಿಜೆಪಿ ನಾಯಕರೊಬ್ಬರು ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಿದ್ದಾರೆ.
ಅದೇನೋ ಅವರ ಮೇಲಿನ ಅಭಿಮಾನದಿಂದಲ್ಲ. ಕೇಜ್ರಿವಾಲ್ರನ್ನು ಓರ್ವ ಮಹಾ ಸುಳ್ಳುಕೋರ ಎಂದು ಬಣ್ಣಿಸಿರುವ ಬಿಜೆಪಿ ನಾಯಕ ತೇಜೀಂದರ್ಪಾಲ್ ಸಿಂಗ್ ಬಗ್ಗಾ, ಆಪ್ ಮುಖಂಡನ ಹೆಸರಲ್ಲಿ ‘ಭಾರತದ ಅತಿದೊಡ್ಡ ಸುಳ್ಳುಗಾರ’ ಎಂಬ ಪ್ರಶಸ್ತಿ ಆರಂಭಿಸಿದ್ದಾರೆ.
ತಮ್ಮ ವಿರೋಧಿಗಳ ವಿರುದ್ಧ ಕೇಜ್ರಿವಾಲ್ ಆಧಾರ ರಹಿತ ಸುಳ್ಳು ಆರೋಪಗಳನ್ನು ಮಾಡುತ್ತಾರೆ, ನೀಡಿರುವ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆಪಾದಿಸಿರುವ ಬಗ್ಗಾ, ಟ್ವೀಟ್ ಮಾಡಿ ಪ್ರಶಸ್ತಿ ಬಗ್ಗೆ ಪ್ರಕಟಿಸಿದ್ದಾರೆ. ಅತಿದೊಡ್ಡ ಸುಳ್ಳುಕೋರರಿಗೆ 5,100 ನಗದು, ಕೇಜ್ರಿವಾಲ್ ಪ್ರಶಸ್ತಿ ನೀಡುವುದಾಗಿ ಅವರು ಘೋಷಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.