
ನವದೆಹಲಿ(ಜ.13): ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪುತ್ರಿಯನ್ನು ಅಪಹರಿಸುವುದಾಗಿ ಬೆದರಿಕೆ ಪತ್ರ ಬಂದಿದ್ದು, ಕೇಜ್ರಿ ಪುತ್ರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ಕೇಜ್ರಿವಾಲ್ ಕಚೇರಿಗೆ ಬಂದಿರುವ ಅನಾಮಿಕ ಇ- ಮೇಲ್ ನಲ್ಲಿ ಪುತ್ರಿಯನ್ನು ಅಪಹರಿಸುವುದಾಗಿ ಬೆದರಿಕೆ ಹಾಕಲಾಗಿದೆ. ಕಳೆದ ಜ.9 ರಂದು ಬಂದಿರುವ ಬೆದರಿಕೆ ಇ- ಮೇಲ್ ದೆಹಲಿಯ ಪೊಲೀಸ್ ಆಯುಕ್ತ ಅಮೂಲ್ಯ ಪಾಟ್ನಯಕ್ ಅವರಿಗೆ ವರ್ಗಾಯಿಸಲಾಗಿದೆ.
ಬೆದರಿಕೆ ಇ-ಮೇಲ್ ಬಂದಿರುವುದನ್ನು ದೆಹಲಿ ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದು, ಅದನ್ನು ಸೈಬರ್ ವಿಭಾಗದ ವಿಶೇಷ ಘಟಕ್ಕೆ ವರ್ಗಾಯಿಸಲಾಗಿದೆ. ಯಾವ ಇ- ಮೇಲ್ ಖಾತೆಯಿಂದ ಈ ಕರೆ ಬಂದಿದೆ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.