
ನವದೆಹಲಿ(ಡಿ.24): ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು 2013ರ ವಿಧಾನಸಭಾ ಚುನಾವಣೆ ವೇಳೆ ಅಫಿಡವಿಟ್'ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಜಾಮೀನು ನೀಡಿದೆ.
ಕೇಜ್ರಿವಾಲ್ ಅವರು 10 ಸಾವಿರ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್ ನೀಡಬೇಕೆಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆಶಿಶ್ ಗುಪ್ತಾ ಅವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ ಹಾಗೂ ಪ್ರಕರಣದ ವಿಚಾರಣೆಯನ್ನು 2017ರ ಏ.7ಕ್ಕೆ ಮುಂದೂಡಲಾಗಿದೆ. ಕೋರ್ಟ್ 2016ರ ಆ. 31ರಂದು ಕೇಜ್ರಿವಾಲ್ ಹಾಜರಿಗೆ ವಿನಾಯ್ತಿ ನೀಡಿತ್ತು.
ನೀರಜ್ ಸಕ್ಸೇನಾ ಹಾಗೂ ಅನುಜ್ ಅಗರ್'ವಾಲ್ ಎಂಬುವರು ನೀಡಿದ್ದ ದೂರಿನನ್ವಯ ಫೆಬ್ರವರಿಯಲ್ಲಿ ಕೇಜ್ರಿವಾಲ್ ವಿರುದ್ಧ ದೂರು ದಾಖಲಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.