
ನವದೆಹಲಿ(ಅ.12): ದೆಹಲಿಯಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕಾರನ್ನು ದುಷ್ಕರ್ಮಿಗಳು ಕಳವು ಮಾಡಿದ್ದಾರೆ.
ದೆಹಲಿ ಸಚಿವಾಲಯದ ಕಟ್ಟಡದ ಬಳಿ ನಿಂತಿದ್ದ ಬ್ಲ್ಯೂ ವ್ಯಾಗನಾರ್ ಕಾರನ್ನು ಕಳ್ಳರು ಕಳವು ಮಾಡಿದ್ದಾರೆ. ಕಾರು ಕಳವಾಗಿರುವ ಬಗ್ಗೆ ದೆಹಲಿ ಪೊಲೀಸರು ಎಫ್'ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಚುನಾವಣೆ ವೇಳೆಯಲ್ಲಿ ಕೇಜ್ರಿವಾಲ್ ಅವರು ಬ್ಲ್ಯೂ ವ್ಯಾಗನಾರ್ ಕಾರನ್ನು ಬಳಸುತ್ತಿದ್ದರು. ದೆಹಲಿ ಪೊಲೀಸರ ವಿರುದ್ಧದ ಪ್ರತಿಭಟನೆಯಲ್ಲಿ ಇದೇ ಕಾರನ್ನು ಬಳಸಿದ್ದ ಕೇಜ್ರಿವಾಲ್ ಅಲ್ಲಿಯೇ ಮಲಗಿದ್ದರು. ಇದು ಒಂದು ರೀತಿಯಲ್ಲಿ ಅವರಿಗೆ ಅದೃಷ್ಟದ ಕಾರಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.