
ನವದೆಹಲಿ (ಮಾ.07): ತಿಹಾರ್ ಜೈಲಿನಲ್ಲಿ ಬಂಧನದಲ್ಲಿರುವ ಮುಜಾಹಿದ್ದೀನ್ ಸಹ ಸಂಸ್ಥಾಪಕ ಯಾಸೀನ್ ಭಟ್ಕಳ್ ತಮ್ಮ ಒಬ್ಬಂಟಿತನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಪಟಿಯಾಲ ಹೌಸ್ ಕೋರ್ಟ್ ಕಾಯ್ದಿರಿಸಿದೆ.
ಜೈಲಿನ ಸೆಲ್ ನಲ್ಲಿ ಅವರು ಒಬ್ಬಂಟಿಯಾಗಿಲ್ಲ. ಅವರ ಮೇಲೆ ಸಾಕಷ್ಟು ಪ್ರಕರಣಗಳು ಬಾಕಿಯಿರುವುದರಿಂದ ಕಣ್ಗಾವಲಿನಲ್ಲಿ ಇಡಲಾಗಿದೆ ಎಂದು ತಿಹಾರ್ ಜೈಲು ಅಧಿಕಾರಿಗಳು ಕೋರ್ಟ್ ಗೆ ಹೇಳಿದ್ದಾರೆ.
2013 ರ ಹೈದರಾಬಾದ್ ಅವಳಿ ಸ್ಪೋಟದ ಅಪರಾಧಕ್ಕಾಗಿ ಯಾಸೀನ್ ಭಟ್ಕಳ್ ಸೇರಿದಂತೆ ನಾಲ್ವರಿಗೆ ಜೀವಾವಧಿ ಶಿಕ್ಷೆ ನೀಡಿದೆ. ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಬಿಗಿ ಭದ್ರತೆ ಇರುವ ಸೆಲ್ ನಲ್ಲಿ ತನ್ನನ್ನು ಇಡಬಾರದು ಎಂದು ಯಾಸಿನ್ ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.