ಮನೆಮನೆಗೆ ಪಡಿತರ ವಿತರಣೆಗೆ ಸರಕಾರದ ಆದೇಶ

Published : Jul 07, 2018, 12:38 PM IST
ಮನೆಮನೆಗೆ ಪಡಿತರ ವಿತರಣೆಗೆ ಸರಕಾರದ ಆದೇಶ

ಸಾರಾಂಶ

ಮನೆ ಮನೆಗೇ ಪಡಿತರ ವಿತರಣೆಯಾದರೆ ಎಷ್ಟು ಚೆನ್ನಾಗಿರುತ್ತದೆ ಅಲ್ಲವೇ? ಇಂಥದ್ದೊಂದು ವ್ಯವಸ್ಥೆಗೆ ಸರಕಾರ ಮುಂದಾಗಿದೆ. ದಿಲ್ಲಿ ಸರ್ಕಾರದ ಈ ಕ್ರಮದಂತೆ ರಾಜ್ಯವೂ ಯೋಜನೆ ರೂಪಿಸಿಕೊಂಡರೆ ಅವ್ಯವಹಾರವನ್ನು ತಡೆಯಬಹುದು.

ನವದೆಹಲಿ: ಕೇಂದ್ರಾಡಳಿತ ಪ್ರದೇಶ ದಿಲ್ಲಿಗೆ ಯಾರು ಬಾಸ್‌ ಎಂಬ ಬಗ್ಗೆ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ಬಳಿಕವೂ ಹಗ್ಗ ಜಗ್ಗಾಟ ಮುಂದುವರೆದಿದೆ. ಪಡಿತರ ವ್ಯವಸ್ಥೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ತೀರ್ಪಿನ ಅನ್ವಯ, ಉಪರಾಜ್ಯಪಾಲರು (ಎಲ್‌ಜಿ) ಹಾಗೂ ಅಧಿಕಾರಿಗಳು ಎತ್ತಿದ್ದ ಎಲ್ಲ ತಕರಾರುಗಳನ್ನು ತಿರಸ್ಕರಿಸಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಮನೆಮನೆಗೆ ಇನ್ನು ಪಡಿತರ ವಿತರಣೆ ಆಗಬೇಕು ಎಂದು ಆದೇಶ ಹೊರಡಿಸಿದ್ದಾರೆ.

ಅಲ್ಲದೆ, ತಕ್ಷಣವೇ ಈ ಯೋಜನೆ ಜಾರಿಯಾಗಬೇಕು ಎಂದು ಆಹಾರ ಹಾಗೂ ನಾಗರಿಕ ಪೂರೈಕೆ ಇಲಾಖೆಗೆ ಸೂಚಿಸಿದ್ದಾರೆ. ಈ ಯೋಜನೆಗೆ ಈ ಮುನ್ನ ಉಪರಾಜ್ಯಪಾಲ ಅನಿಲ್‌ ಬೈಜಲ್‌ ಆಕ್ಷೇಪ ಎತ್ತಿದ್ದರು. ಆದರೆ ಪೊಲೀಸ್‌, ಭೂಮಿ ಮತ್ತು ಸಾರ್ವಜನಿಕ ಸುವ್ಯವಸ್ಥೆ ಹೊರತುಪಡಿಸಿದರೆ ಮಿಕ್ಕ ಯಾವ ಇಲಾಖೆ ಮೇಲೂ ಉಪರಾಜ್ಯಪಾಲರಿಗೆ ಅಧಿಕಾರ ಇಲ್ಲ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಈಗ ಪಡಿತರ ವಿಷಯದಲ್ಲಿ ಅವರಿಗೆ ಅಧಿಕಾರ ಇಲ್ಲದಂತಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2019ರಲ್ಲಿ 6 ಸಾವಿರಕ್ಕೆ ಕೆಲಸ, ಕೆಪಿಎಸ್ಸಿ ಸದಸ್ಯನಾದ ಬಳಿಕ 100 ಎಕರೆ ಜಮೀನು: ಇದು 'ನುಂಗಪ್ಪ' ಸಾಹುಕಾರ್‌ ಸ್ಟೋರಿ
3700 ಸರ್ಕಾರಿ ಶಾಲೆ, ಕಾಲೇಜಲ್ಲಿ ಸದ್ಯದಲ್ಲೇ ಸ್ಮಾರ್ಟ್‌ ಕ್ಲಾಸ್‌ ಶುರು, ಖಾಸಗಿ ಶಾಲೆಗಳ ಮಾದರಿ ಡಿಜಿಟಲ್‌ ಶಿಕ್ಷಣಕ್ಕೆ ಸರ್ಕಾರ ಸಿದ್ಧತೆ