
ನವದೆಹಲಿ[ಆ.28]: ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜನರ ಓಲೈಕೆ ಕಾರ್ಯಕ್ರಮ ಮುಂದುವರೆಸಿದ್ದಾರೆ.
ಮಹಿಳೆಯರಿಗೆ ಮೆಟ್ರೋ, ಬಸ್ನಲ್ಲಿ ಉಚಿತ ಪ್ರಯಾಣ, 200 ವ್ಯಾಟ್ವರೆಗೆ ಉಚಿತ ವಿದ್ಯುತ್ ಪೂರೈಕೆ ಯೋಜನೆ ಘೋಷಿಸಿದ್ದ ಕೇಜ್ರಿ, ಇದೀಗ ಮಹಾನಗರಿಯ ಜನರ ನೀರಿನ ಬಿಲ್ ಬಾಕಿಯನ್ನು ಮನ್ನಾ ಮಾಡಿರುವುದಾಗಿ ಘೋಷಿಸಿದ್ದಾರೆ.
ಚುನಾವಣೆ ಮೇಲೆ ಕಣ್ಣು: ಆಟೋ ಚಾಲಕರಿಗೆ ಸಿಎಂ ಭರ್ಜರಿ ಗಿಫ್ಟ್!
ದಿಲ್ಲಿಯಲ್ಲಿ ಮಾಸಿಕ 20000 ಲೀ.ವರೆಗೆ ಉಚಿತ ನೀರು ಪೂರೈಕೆ ಮಾಡಲಾಗುತ್ತಿದೆ. ಉಳಿದ ಬಳಕೆಗೆ ದರ ವಿಧಿಸಲಾಗುತ್ತದೆ. ಇದನ್ನು ಬಾಕಿ ಉಳಿಸಿಕೊಂಡವರಿಗೆ ಇದೀಗ ಬಾಕಿ ಮನ್ನಾ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.