
ನವದೆಹಲಿ, [ನ.22]: ಮದುವೆ ಆಗಲು ಗಂಡೆದೆ ಬೇಕು ಎನ್ನುತ್ತಾರೆ. ಆದರೆ, ದೆಹಲಿಯ ವರನೊಬ್ಬ ಭುಜಕ್ಕೆ ಗುಂಡು ಹೊಕ್ಕಿದ್ದರೂ ಮದುವೆ ಮಂಟಪಕ್ಕೆ ಬಂದು ತಾಳಿ ಕಟ್ಟಿದ್ದಾನೆ.
ಮದುವೆಯ ಸಂಭ್ರಮದಲ್ಲಿದ್ದ ವರನ ಮೇಲೆ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಸೋಮವಾರ ರಾತ್ರಿ ಗುಂಡಿನ ದಾಳಿ ನಡೆಸಿದ್ದರು.ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
ಆದರೆ, ಭುಜ ಭಾಗದಲ್ಲಿ ಹೊಕ್ಕಿರುವ ಗುಂಡು ತೆಗೆಯಲು ಸಾಧ್ಯವಾಗಿಲಿಲ್ಲ. ಆದರೂ ವರ ಅದೇ ಸ್ಥಿತಿಯಲ್ಲಿ ವಧುಗೆ ತಾಳಿಕಟ್ಟಿ ಮದುವೆ ಆಗಿದ್ದಾನೆ. ಗುಂಡು ಹಾರಿಸಿರುವುದಕ್ಕೆ ಕಾರಣ ಗೊತ್ತಾಗಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ