
ನವದೆಹಲಿ(ಮಾ.24): ಶಿವಸೇನಾ ಸಂಸದನಿಂದ ಚಪ್ಪಲಿಯಿಂದ ಹೊಡೆಸಿಕೊಂಡ ಏರ್ ಇಂಡಿಯಾ ಸಿಬ್ಬಂದಿಯ ದೂರು ಆಧರಿಸಿ ದೆಹಲಿ ಪೊಲೀಸರು ರವೀಂದ್ರ ಗಾಯಕ್ ವಾಡ್ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.
ರವೀಂದ್ರ ಗಾಯಕ್ ವಾಡ್ ವಿರುದ್ಧ ಐಪಿಸಿ ಸೆಕ್ಷನ್ 308 ಮತ್ತು 355 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಲಾಗಿದೆ. ದೆಹಲಿ ಕ್ರೈಮ್ ಬ್ರಾಂಚ್ ಪೊಲೀಸರಿಗೆ ವರ್ಗಾಯಿಸಲಾಗಿದೆ ಎಂದು ದೆಹಲಿ ಪೊಲೀಸ್ ವಕ್ತಾರ ದೀಪೇಂದ್ರ ಪಠಕ್ ಹೇಳಿದ್ದಾರೆ.
ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಹೊಂದಿದ್ದರೂ ಸಹ ಎಕಾನಮಿ ಕ್ಲಾಸ್ ನಲ್ಲಿ ಪ್ರಯಾಣ ಮಾಡುವಂತೆ ಮಾಡಿದರು ಎಂದು ಆರೋಪಿಸಿ ಏರ್ ಇಂಡಿಯಾ ವಿರುದ್ಧ ಗಾಯಕ್ ವಾಡ್ ದೂರು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.