ವೈದ್ಯರ ನಿರ್ಲಕ್ಷ್ಯ : ತಲೆಗೆ ಗಾಯಗೊಂಡ ವ್ಯಕ್ತಿಗೆ ಕಾಲಿನ ಶಸ್ತ್ರಚಿಕಿತ್ಸೆ

Published : Apr 23, 2018, 01:17 PM ISTUpdated : Apr 23, 2018, 01:37 PM IST
ವೈದ್ಯರ ನಿರ್ಲಕ್ಷ್ಯ : ತಲೆಗೆ ಗಾಯಗೊಂಡ ವ್ಯಕ್ತಿಗೆ ಕಾಲಿನ ಶಸ್ತ್ರಚಿಕಿತ್ಸೆ

ಸಾರಾಂಶ

ವೈದ್ಯರ  ನಿರ್ಲಕ್ಷ್ಯದ ಬಗ್ಗೆ ಪದೇ ಪದೇ ವರದಿಗಳಾಗುತ್ತಲೇ ಇರುತ್ತದೆ. ಇದೀಗ ಇಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಂತಹ ಘಟನೆಗಳಿಂದ ಜನರು ಆಸ್ಪತ್ರೆಗೆ ತೆರಳಲು ಕೂಡ ಭಯಪಡುವಂತಾಗಿದೆ

ನವದೆಹಲಿ : ವೈದ್ಯರ  ನಿರ್ಲಕ್ಷ್ಯದ ಬಗ್ಗೆ ಪದೇ ಪದೇ ವರದಿಗಳಾಗುತ್ತಲೇ ಇರುತ್ತದೆ. ಇದೀಗ ಇಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಂತಹ ಘಟನೆಗಳಿಂದ ಜನರು ಆಸ್ಪತ್ರೆಗೆ ತೆರಳಲು ಕೂಡ ಭಯಪಡುವಂತಾಗಿದೆ.  

ದಿಲ್ಲಿ ಸರ್ಕಾರದ ನಿರ್ವಹಣೆಯಲ್ಲಿರುವ ಶುಶ್ರುತಾ ಟ್ರೌಮಾ ಸೆಂಟರ್’ನಲ್ಲಿ ಹೆಡ್ ಇಂಜುರಿಯಿಂದ ದಾಖಲಾದ ವ್ಯಕ್ತಿಗೆ ಕಾಲಿನ ಶಸ್ತ್ರ ಚಿಕಿತ್ಸೆ ನೆರವೇರಿಸಿದ ಘಟನೆ ಬೆಳಕಿಗೆ ಬಂದಿದೆ.

ವಿಜೇಂದ್ರ ತ್ಯಾಗಿ ಎನ್ನುವವರು ಚಿಕ್ಕ ಅಪಘಾತವೊಂದರಲ್ಲಿ ತಲೆಗೆ ಏಟು ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು.  ಈ ವೇಳೆ ಇಲ್ಲಿನ ಸರ್ಜನ್ ಗೊಂದಲಗೊಂಡು ತ್ಯಾಗಿ ಅವರಿಗೆ ತಲೆಯ ಗಾಯಕ್ಕೆ ಉಪಚಾರ ಮಾಡುವ ಬದಲು ಕಾಲಿನ ಶಸ್ತ್ರಚಿಕಿತ್ಸೆ ನೆರವೇರಿಸಿದ್ದಾರೆ.

ಅರಿವಳಿಕೆ ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ್ದು ಅವರಿಗೆ ಅದರ ಅರಿವಾಗಲಿಲ್ಲ ಎಂದು ತ್ಯಾಗಿ ಕುಟುಂಬಸ್ಥರು ದೂರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಟ್ರಾಮಾ ಸೆಂಟರ್ ಮೆಡಿಕಲ್ ಸೂಪರಿಂಟೆಂಡೆಂಟ್  ಕರ್ತವ್ಯ ನಿರ್ಲಕ್ಷ್ಯ ತೋರಿದ ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?