
ನವದೆಹಲಿ (ನ.15): ಹಳೆಯ ನೋಟುಗಳ ಅಪಮೌಲ್ಯೀಕರಣವನ್ನು 'ಖಡಕ್ ಚಾಯ್' ಇದ್ದಂತೆ ಎಂದು ವರ್ಣಿಸಿದ ಮೋದಿಯವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಜ್ರಿವಾಲ್ ಇದು 'ಜನಸಾಮಾನ್ಯರಿಗೆ ವಿಷವಿದ್ದಂತೆ' ಎಂದು ಕಟುಕಿದ್ದಾರೆ.
ದೆಹಲಿ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಭಾಗವಹಿಸುತ್ತಾ, ಪ್ರಧಾನಿ ನರೇಂದ್ರ ಮೋದಿ ಬಡವರನ್ನು ಶೋಷಿಸಿ ತಮ್ಮ ಕಾರ್ಪೋರೇಟ್ ಸ್ನೇಹಿತರನ್ನು ರಕ್ಷಿಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯು ಇಂತಹ ಬ್ಯುಸಿನೆಸ್ ಮೆನ್ ಗಳ ಮನೆ ಮೇಲೆ ದಾಳಿ ನಡೆಸಿಲ್ಲ ಎಂದು ಆರೋಪಿಸಿದರು.
ಪ್ರಧಾನಿಯವನ್ನುದ್ದೇಶಿಸಿ, ನೀವು ಹೇಳುತ್ತೀರಿ ಬಡವರು ಕಹಿ ಚಾಯನ್ನು (ಕಡ್ವಿ ಚಾಯ್) ಕುಡಿಯುತ್ತಾರೆಂದು. ಆದರೆ ಕಪ್ಪುಹಣದ ಹೆಸರಿನಲ್ಲಿ ನೀವು ಅವರಿಗೆ ವಿಷವನ್ನು ಕುಡಿಯಲು ಆಫರ್ ನೀಡುತ್ತಿದ್ದೀರಿ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.