
ನವದೆಹಲಿ (ಡಿ.17): ನೋಟು ನಿಷೇಧ ನೀತಿಯು 3 ರಿಂದ 5 ಲಕ್ಷ ಕೋಟಿ ಮೊತ್ತದ ಹಗರಣವನ್ನು ಬಹಿರಂಗಗೊಳಿಸಲಿದೆ ಎಂದು ಬಾಬಾ ರಾಮ್ ದೇವ್ ಹೇಳಿದ್ದಾರೆ.
ಒಂದೇ ಸರಣಿಯ ಎರಡು ಮುಖಬೆಲೆಯ ನೋಟುಗಳನ್ನು ಆರ್ ಬಿಐ ಅಥವಾ ಹಿಂದಿನ ಸರ್ಕಾರ ಬಿಡುಗಡೆ ಮಾಡಿದೆ. ಇದು ಆರ್ಥಿಕತೆಗೆ ಕಪ್ಪುಚುಕ್ಕಿ ಎಂದು ರಾಮ್ ದೇವ್ ಆರೋಪಿಸಿದ್ದಾರೆ.
ಆರ್ ಬಿಐ ಕೆಳಗೆ ಕೆಲಸ ಮಾಡುವ ಕೆಲವು ಮಂದಿಯ ವರ್ತನೆ ಅನುಮಾನಾಸ್ಪದವಾಗಿದೆ. ನಮ್ಮ ವ್ಯವಸ್ಥೆಯ ಬಗ್ಗೆಯೇ ಪ್ರಶ್ನೆ ಎತ್ತುವ ಸ್ಥಿತಿ ಬಂದಿರುವುದು ದೌರ್ಭಾಗ್ಯ. ಒಂದೇ ಸರಣಿಯ ಎರಡು ಮುಖಬೆಲೆಯ ನೋಟುಗಳನ್ನು ಸರ್ಕಾರ ಅಥವಾ
ಆರ್ ಬಿಐ ಮುದ್ರಿಸಿದ್ದರೆ ಇದರ ಬಗ್ಗೆ ಚರ್ಚೆಯಾಗಬೇಕು. ಆರ್ಥಿಕತೆಗೆ ಇದೊಂದು ಕಪ್ಪುಚುಕ್ಕೆಯಾಗಿದೆ. ಇದು 3-5 ಲಕ್ಷ ಕೋಟಿ ಹಗರಣವನ್ನು ಬಹಿರಂಗಗೊಳಿಸಲಿದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.