
ನವದೆಹಲಿ (ನ.21): ನೋಟು ನೀಷೇಧ ಕ್ರಮದಿಂದಾಗಿ ಮೃತಪಟ್ಟಿರುವ ಹಿರಿಯ ನಾಗರಿಕರೋರ್ವರ ಕುಟುಂಬ ಸದಸ್ಯರು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಕೇಂದ್ರ ಸರ್ಕಾರ ಮೃತರ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕೆಂದು ಅರ್ಜಿದಾರರು ಹೇಳಿದ್ದಾರೆ.
ಕೇಂದ್ರ ಸರ್ಕಾರ ದೊಡ್ಡ ಮುಖಬೆಲೆಯ ನೊಟುಗಳನ್ನು ನಿಷೇಧಿಸಿದ ಬಳಿಕ, ಅದನ್ನು ಬದಲಾಯಿಸಲು ಬ್ಯಾಂಕ್ ಸರತಿಯಲ್ಲಿ ನಿಂತಿದ್ದ ಸಿಯಾ ರಾಮ್ ಎಂಬ 70 ವರ್ಷದ ದಿನಗೂಲಿ ಕಾರ್ಮಿಕ ಮೃತಪಟ್ಟಿದ್ದರು.
ಹೊಸ ನೊಟು ಪಡೆಯಲು ಸಿಯಾ ರಾಮ್ ಮೂರು ದಿನಗಳಿಂದ ಸರತಿಯಲ್ಲಿ ನಿಲ್ಲುತ್ತಿದ್ದರು, ನ.17 ರಂದು ಸರತಿಯಲ್ಲಿ ಕುಸಿದು ಬಿದ್ದು ಸಾವನಪ್ಪಿದ್ದಾರೆ ಎಂದು ಅವರ ಮಗ ಕನ್ಹಯ್ಯ ಹೇಳಿದ್ದಾನೆ.
5 ಲಕ್ಷ ಜನಸಂಖ್ಯೆಯಿರುವ ನಗರದಲ್ಲಿ ಕೇವಲ 40 ಏಟಿಎಮ್’ಗಳಿದ್ದು, ಅವುಗಳು ಕೂಡಾ ಸರಿಯಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ ಎಂದು ಕನ್ಹಯ್ಯ ಅರ್ಜಿಯಲ್ಲಿ ಹೇಳಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.