ಸ್ಮಾರ್ಟ್‌ಫೋನ್‌ಗಾಗಿ ತಂದೆಯನ್ನೇ ಕೊಂದ ಮಗ!

Published : Jun 25, 2018, 04:53 PM IST
ಸ್ಮಾರ್ಟ್‌ಫೋನ್‌ಗಾಗಿ ತಂದೆಯನ್ನೇ ಕೊಂದ ಮಗ!

ಸಾರಾಂಶ

ಸ್ಮಾರ್ಟ್‌ಫೋನ್‌ಗಾಗಿ ತಂದೆಯನ್ನೇ ಕೊಂದ ಮಗ ಗುದ್ದಲಿಯಿಂದ ಹೊಡೆದು ತಂದೆ ಕೊಂದ ಪಾಪಿ ಹಣ ಕೊಡಲು ನಿರಾಕರಿಸಿದ್ದಕ್ಕೆ ಕೊಲೆ

ಕಾನ್ಪುರ್(ಜೂ.25): ಸ್ಮಾರ್ಟ್‌ಫೋನ್‌ ಕೊಳ್ಳಲು ಹಣ ಕೊಡದ ತಂದೆಯನ್ನು ಪಾಪಿ ಮಗನೋರ್ವ ಕೊಲೆ ಮಾಡಿರುವ ದಾರುಣ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
 
ಸ್ಮಾರ್ಟ್‌ಫೋನ್‌ ಬೇಕೆಂದು ಹಠ ಹಿಡಿದ 19 ವರ್ಷದ ಆನಂದ್ ಕಿಶೋರ್ ತಿವಾರಿ, ಅದನ್ನು ಕೊಡಿಸಲೊಪ್ಪದ ತನ್ನ ತಂದೆ 60 ವರ್ಷದ ಕೃಷ್ಣ ಕುಮಾರ್ ಎಂಬುವರರ ಗುದ್ದಲಿ ತೆಗೆದುಕೊಂಡು ತಲೆಗೆ ಬಲವಾಗಿ ಹೊಡೆದಿದ್ದಾನೆ. ಇದರಿಂದ ತೀವ್ರ ರಕ್ತಸಾವ್ರವಾಗಿ ಕೃಷ್ಣ ಕುಮಾರ್ ಮೃತಪಟ್ಟಿದ್ದಾರೆ. 

ಘಟನೆ ವೇಳೆ ಕೃಷ್ಣ ಕುಮಾರ್ ಅವರು ಕಿರುಚಾಡಿದ್ದರಿಂದ ನೆರೆಹೊರೆಯವರು ಅಲ್ಲಿಗೆ ಬಂದು ತಪ್ಪಿಸಿಕೊಳ್ಳಲು ಮುಂದಾಗುತ್ತಿದ್ದ ಆನಂದ್‌ನನ್ನು ಬಂಧಿಸಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಆನಂದ್ ಕೃಷ್ಣ ಕುಮಾರ್ ಅವರ ಮೂರನೇ ಮಗ ಎನ್ನಲಾಗಿದ್ದು, ಆಗಾಗ ಇವರಿಬ್ಬರ ಮಧ್ಯೆ ಜಗಳ ನಡೆಯುತ್ತಲೇ ಇರುತ್ತಿತ್ತು ಎಂದು ನೆರೆಹೊರೆಯವರು ತಿಳಿಸಿದ್ದಾರೆ. 

ಕೆಲಸ ಕಾರ್ಯವಿಲ್ಲದೆ ಬೇಕಾಬಿಟ್ಟಿ ತಿರುಗಾಡಿಕೊಂಡಿದ್ದ ಆನಂದ್ ದುಡ್ಡಿಗಾಗಿ ಪದೇ ಪದೇ ತಂದೆಯನ್ನು ಪೀಡಿಸುತ್ತಿದ್ದ. ಕಳೆದ ಶನಿವಾರ ರಾತ್ರಿ ಸ್ಮಾರ್ಟ್‌ಫೋನ್‌ ಬೇಕೆಂದು ಹಠ ಹಿಡಿದು, ಹಣ ಕೊಡಲು ನಿರಾಕರಿಸಿದ ತಂದೆಯನ್ನೇ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್