‘ತುಮಕೂರಲ್ಲಿ ಬಿಜೆಪಿ ಗೆಲ್ಲಲು ಕಾರಣ ಡಿಸಿಎಂ ಪರಮೇಶ್ವರ್’

Published : Jun 04, 2019, 12:41 PM IST
‘ತುಮಕೂರಲ್ಲಿ ಬಿಜೆಪಿ ಗೆಲ್ಲಲು ಕಾರಣ ಡಿಸಿಎಂ ಪರಮೇಶ್ವರ್’

ಸಾರಾಂಶ

ತುಮಕೂರಿನಲ್ಲಿ ಬಿಜೆಪಿ ಗೆಲುವಿಗೆ ಪ್ರಮುಖ ಕಾರಣ  ಉಪ ಮುಖ್ಯಮಂತ್ರಿ ಪರಮೇಶ್ವರ್ ಎಂದು ಬಿಜೆಪಿ ನಾಯಕರೋರ್ವರು ಸ್ಫೋಟಕ ವಿಚಾರ ಹೇಳಿದ್ದಾರೆ. ಅವರ ಚಾಣಾಕ್ಷತನವೇ ದೇವೇಗೌಡರ ಸೋಲಿಗೆ ಕಾರಣವಾಯಿತು ಎಂದಿದ್ದಾರೆ. 

ತುಮಕೂರು :  ತಮ್ಮ ಸ್ವ ಕ್ಷೇತ್ರ ತುಮಕೂರಿನಲ್ಲಿ ಬಿಜೆಪಿ ಗೆಲ್ಲಿಸಲು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಸಾವಿರ ಪಟ್ಟು ಯತ್ನಿಸಿದ್ದಾರೆ. ಜಿ.ಎಸ್ ಬಸವರಾಜು ಗೆಲುವಿನಲ್ಲಿ  ಪರಮೇಶ್ವರ್ ಪಾತ್ರ ಹೆಚ್ಚಿದೆ ಎಂದು ಬಿಜೆಪಿ ನಾಯಕರೋರ್ವರು ಬಾಂಬ್ ಸಿಡಿಸಿದ್ದಾರೆ. 

ಜೆಡಿಎಸ್ ಸೋತು ಬಿಜೆಪಿ ಗೆಲ್ಲಲು ಕಾರಣ ಪರಮೇಶ್ವರ್, ತಾವು ಇದನ್ನು ಹತ್ತಿರದಿಂದಲೇ ನೊಡಿದ್ದೇನೆ. ಪರಮೇಶ್ವರ್ ಬಿಜೆಪಿ ನಾಯಕಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಮೋದಿಜಿ ಅವರ ಕೈ ಬಲಪಡಿಸಲು ಸಹಕರಿಸಿ ಪರಮೇಶ್ವರ್ ಅವರಿಗೆ ಧನ್ಯವಾದ ಎಂದು ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ನಾಯಕ ರಾಮಾಂಜನೇಯ ಹೇಳಿದ್ದಾರೆ. 

ಚಾಣಾಕ್ಷರಾದ ಜೆಡಿಎಸ್ ನಾಯಕ ದೇವೇಗೌಡರ ಚಾಣಾಕ್ಷತೆಯನ್ನು ಮೀರಿ ಪ್ಲಾನ್ ಮಾಡಿ ಪರಮೇಶ್ವರ್  ಸೋಲಿಸಿ ಸೇಡು ತೀರಿಸಿಕೊಂಡಿದ್ದಾರೆ ಎಂದರು.  

ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಲ್ಲಿ ಜೆಡಿಎಸ್ ಹಿರಿಯ ನಾಯಕ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜು ವಿರುದ್ಧ ಪರಾಭವಗೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನನಗೆ ಎಚ್ಚರಿಕೆ ಕೊಡೋ ಮುನ್ನ ಹುಷಾರ್, ಕಾಮನ್‌ಸೆನ್ಸ್ ಇಟ್ಟುಕೊಂಡು ಡೀಲ್ ಮಾಡಿ, ಪತ್ರ ಬರೆದವನಿಗೆ ಡಿಕೆಶಿ ವಾರ್ನಿಂಗ್!
5 ಸಾವಿರ ಕೊಡ್ತೀನಿ ರೂಮ್‌ಗೆ ಬಾ ಅಂದ್ರು? ಬ್ರಹ್ಮಾನಂದ ಗುರೂಜಿಯ ವಿಡಿಯೋ ವೈರಲ್