ಜಗನ್‌ ತಿರಸ್ಕರಿಸಿದ ಸ್ಥಾನ ಶಿವಸೇನೆ ಪಾಲು?

By Web DeskFirst Published Jul 1, 2019, 9:31 AM IST
Highlights

ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ತಿರಸ್ಕರಿಸಿದ್ದ ಸ್ಥಾನ ಇದೀಗ ಶಿವಸೇನೆ ಪಾಲಾಗುವ ಸಾಧ್ಯತೆಗಳು ಹೆಚ್ಚಾಗಿದೆ. 

ನವದೆಹಲಿ[ಜು.1] : ಲೋಕಸಭೆ ಉಪಸಭಾಪತಿ ಸ್ಥಾನಕ್ಕೆ ಎನ್‌ಡಿಎ ಮೈತ್ರಿ ಪಕ್ಷಗಳಲ್ಲಿ ಒಂದಾದ ಶಿವಸೇನೆಯ ಅಭ್ಯರ್ಥಿಯೊಬ್ಬರನ್ನು ನೇಮಕ ಮಾಡುವ ಸಾಧ್ಯತೆ ಇದೆ.

ಈ ಮೊದಲು ಜಗನ್‌ಮೋಹನ್‌ ರೆಡ್ಡಿ ನೇತೃತ್ವ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಈ ಹುದ್ದೆಯ ಆಫರ್‌ ನೀಡಲಾಗಿತ್ತು. ಆದರೆ ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡುವ ಬಗ್ಗೆ ಕೇಂದ್ರದಿಂದ ಖಚಿತ ಭರವಸೆ ಸಿಗದ ಹಿನ್ನೆಲೆಯಲ್ಲಿ ಅವರು ಹುದ್ದೆ ತಿರಸ್ಕರಿಸಿದ್ದರು. 

ಈ ಹಿನ್ನೆಲೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅತಿದೊಡ್ಡ ಪಕ್ಷವಾದ ಶಿವಸೇನೆಗೆ ಹುದ್ದೆ ನೀಡುವ ತೀರ್ಮಾನಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ.

click me!