
ನವದೆಹಲಿ[ಜು.1] : ಲೋಕಸಭೆ ಉಪಸಭಾಪತಿ ಸ್ಥಾನಕ್ಕೆ ಎನ್ಡಿಎ ಮೈತ್ರಿ ಪಕ್ಷಗಳಲ್ಲಿ ಒಂದಾದ ಶಿವಸೇನೆಯ ಅಭ್ಯರ್ಥಿಯೊಬ್ಬರನ್ನು ನೇಮಕ ಮಾಡುವ ಸಾಧ್ಯತೆ ಇದೆ.
ಈ ಮೊದಲು ಜಗನ್ಮೋಹನ್ ರೆಡ್ಡಿ ನೇತೃತ್ವ ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಈ ಹುದ್ದೆಯ ಆಫರ್ ನೀಡಲಾಗಿತ್ತು. ಆದರೆ ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡುವ ಬಗ್ಗೆ ಕೇಂದ್ರದಿಂದ ಖಚಿತ ಭರವಸೆ ಸಿಗದ ಹಿನ್ನೆಲೆಯಲ್ಲಿ ಅವರು ಹುದ್ದೆ ತಿರಸ್ಕರಿಸಿದ್ದರು.
ಈ ಹಿನ್ನೆಲೆಯಲ್ಲಿ ಎನ್ಡಿಎ ಮೈತ್ರಿಕೂಟದ ಅತಿದೊಡ್ಡ ಪಕ್ಷವಾದ ಶಿವಸೇನೆಗೆ ಹುದ್ದೆ ನೀಡುವ ತೀರ್ಮಾನಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.