
ನವದೆಹಲಿ[ಸೆ.16]: ದೆಹಲಿಯಲ್ಲಿನ ಅಧಿಕೃತ ನಿವಾಸ ತೆರವುಗೊಳಿಸುವಂತೆ ಮಾಜಿ ಸಂಸದರಿಗೆ ಕೇಂದ್ರ ನೀಡಲಾಗಿದ್ದ ಸೂಚನೆಯನ್ನು ಧಿಕ್ಕರಿಸಿ ಇನ್ನೂ 82 ಮಾಜಿಗಳು ದೆಹಲಿಯಲ್ಲಿ ತಮ್ಮ ನಿವಾಸದಲ್ಲೇ ಉಳಿದುಕೊಂಡಿದ್ದಾರೆ. ಹೀಗಾಗಿ ಶೀಘ್ರವೇ ಅವರನ್ನು ಮನೆಯಿಂದ ಸರ್ಕಾರ ಎತ್ತಂಗಡಿ ಮಾಡಿಸುವ ಸಾಧ್ಯತೆ ಇದೆ.
ಇನ್ನೊಂದು ವಾರದಲ್ಲಿ ನಿಮಗ ನೀಡಿದ್ದ ಮನೆ ಖಾಲಿ ಮಾಡಬೇಕು. ವಾರದ ಗಡುವು ಮುಗಿದ ಬಳಿಕ ಮನೆಗೆ ನೀಡಲಾಗಿದ್ದ ವಿದ್ಯುತ್, ನೀರು, ಅಡುಗೆ ಅನಿಲ ಸಂಪರ್ಕ ಕಡಿತ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಆ.19ರಂದು ಸುಮಾರು 200 ಮಾಜಿ ಸಂಸದರಿಗೆ ನೋಟಿಸ್ ಜಾರಿ ಮಾಡಿತ್ತು.
ದಿಲ್ಲಿ ಸರ್ಕಾರಿ ಬಂಗ್ಲೆ ಬಿಡದ 200 ಮಾಜಿ ಸಂಸದರು!
ಬಳಿಕ 118 ಸದಸ್ಯರು ಮನೆ ಖಾಲಿ ಮಾಡಿದ್ದಾರೆ. ಆದರೆ ಇನ್ನೂ 82 ಮಾಜಿಗಳು ಇನ್ನು ಮನೆ ಬಿಟ್ಟು ಹೋಗುವ ಸುಳಿವು ನೀಡಿಲ್ಲ. ಹೀಗಾಗಿ ಅವರನ್ನು ಸರ್ಕಾರ ಬಲವಂತವಾಗಿ ಎತ್ತಂಗಡಿ ಮಾಡಿಸುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.