ಶೀಘ್ರದಲ್ಲೇ ಶಾಲೆಗಳಲ್ಲಿ ತೇರ್ಗಡೆ ಪದ್ಧತಿ ಮರು-ಪರಿಚಯ: ಜಾವಡೇಕರ್

Published : Jul 22, 2017, 06:46 PM ISTUpdated : Apr 11, 2018, 01:00 PM IST
ಶೀಘ್ರದಲ್ಲೇ ಶಾಲೆಗಳಲ್ಲಿ ತೇರ್ಗಡೆ ಪದ್ಧತಿ ಮರು-ಪರಿಚಯ: ಜಾವಡೇಕರ್

ಸಾರಾಂಶ

ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ತೇರ್ಗಡೆ ಪದ್ಧತಿಯನ್ನು ಶೀಘ್ರದಲ್ಲೇ ಮರು-ಪರಿಚಯಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಕೋಲ್ಕತ್ತಾ: ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ತೇರ್ಗಡೆ ಪದ್ಧತಿಯನ್ನು ಶೀಘ್ರದಲ್ಲೇ ಮರು-ಪರಿಚಯಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಸಂಸತ್ತಿನಲ್ಲಿ ಮಂಡನೆಯಾಗಿರುವ ಮಸೂದೆಯಲ್ಲಿ, 5ನೇ ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸುವ ಅಧಿಕಾರವನ್ನು ರಾಜ್ಯಗಳಿಗೆ ನೀಡಲಾಗಿದೆ. ಮಾರ್ಚ್’ನಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿನಲ್ಲಿ ಇನ್ನೊಂದು ಅವಕಾಶವನ್ನು ನೀಡಲಾಗುವುದು, ಎಂದು ಜಾವಡೇಕರ್ ಹೇಳಿದ್ದಾರೆ.

ಮೇನಲ್ಲಿ ನಡೆಯುವ ಪರೀಕ್ಷೆಯಲ್ಲೂ ತೇರ್ಗಡೆ ಹೊಂದಲು ವಿಫಲರಾದ ವಿದ್ಯಾರ್ಥಿ ಮುಂದಿನ ತರಗತಿಗೆ ಹೋಗುವಂತಿಲ್ಲ; ಎಲ್ಲಾ ರಾಜ್ಯ ಸರ್ಕಾರಗಳು ಈ ಪದದ್ದತಿಗೆ ತಮ್ಮ ಒಪ್ಪಿಗೆಯನ್ನು ನೀಡಿವೆ, ಎಂದು ಅವರು ಹೇಳಿದ್ದಾರೆ.

ಅನುತ್ತೀರ್ಣಗೊಳಿಸದಿರುವ ಪದ್ಧತಿಯು ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಎಂದು ಜಾವಡೇಕರ್ ಹೇಳಿದ್ದಾರೆ.

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ