ರೋಹಿಣಿ ಸಿಂಧೂರಿ ವರ್ಗಾವಣೆ; ದೇವೇಗೌಡ್ರು ಗರಂ; ಸರಿ ಎಂದ ಸಿಎಂ

Published : Jan 23, 2018, 12:21 PM ISTUpdated : Apr 11, 2018, 12:45 PM IST
ರೋಹಿಣಿ ಸಿಂಧೂರಿ ವರ್ಗಾವಣೆ; ದೇವೇಗೌಡ್ರು ಗರಂ; ಸರಿ ಎಂದ ಸಿಎಂ

ಸಾರಾಂಶ

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ದೇವೇಗೌಡರು ಗರಂ ಆಗಿದ್ದಾರೆ.  

ಬೆಂಗಳೂರು (ಜ.23): ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ದೇವೇಗೌಡರು ಗರಂ ಆಗಿದ್ದಾರೆ.  

ಪ್ರಾಮಾಣಿಕ ಅಧಿಕಾರಿಯನ್ನು ಸರ್ಕಾರ ವರ್ಗಾವಣೆ ಮಾಡಿದೆ.  ಒಬ್ಬ ಮಂತ್ರಿಗೋಸ್ಕರವಾಗಿ, ಅವರ ಒತ್ತಡಕ್ಕೆ ಮಣಿದು ಡಿಸಿ ವರ್ಗಾವಣೆ ಮಾಡಲಾಗಿದೆ.  ಮೀಟಿಂಗ್​'​​​ನಲ್ಲಿ ಸಿಎಂ ಮುಂದೆಯೇ ಮಾತನಾಡಿದ ಹೆಣ್ಣುಮಗಳು ರೋಹಿಣಿ ಎಂದು ಗೌಡ್ರು ಹೇಳಿದ್ದಾರೆ.

ಡಿಸಿ ಬಂದು ಆರು ತಿಂಗಳು ಕೂಡ ಆಗಿಲ್ಲ. ಈ ಹಿಂದಿನ ಡಿಸಿಗೂ ಸರ್ಕಾರ ಹೀಗೆಯೇ ಮಾಡಿದೆ.  ಭ್ರಷ್ಟಾಚಾರ ವಿಚಾರದಲ್ಲಿ ಬಹಳ ಕಠಿಣವಾಗಿದ್ದಾರೆ ಡಿಸಿ. ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ಆರೋಪಿಸಿದಂತೆ ರೋಹಿಣಿ ಸಿಂಧೂರಿ ಜೆಡಿಎಸ್ ಪರವಾಗಿಲ್ಲ ಎಂದು ಎ.ಮಂಜು ವಿರುದ್ಧ ಗೌಡರು ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ  ಸರ್ಕಾರದ ವಿರುದ್ಧವೂ ದೇವೇಗೌಡರು ವಾಗ್ದಾಳಿ ನಡೆಸಿದ್ದಾರೆ.

ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಇದು ಆಡಳಿತಾತ್ಮಕ ವರ್ಗಾವಣೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಿಶು ಮಾರಾಟ ಜಾಲ ಬೇಧಿಸಿದ ಪೊಲೀಸರು: ಒಂದು ಮಗುವಿಗೆ 15 ಲಕ್ಷ: ಆಸ್ಪತ್ರೆಗಳ ಜೊತೆ ಖದೀಮರ ಸಂಪರ್ಕ
ಭಟ್ಕಳ ಸಿಪಿಐ, ಹೆಡ್ ಕಾನ್ಸ್ಟೆಬಲ್ ಅಮಾನತು: Drink and Drive, ಹಣ ವಸೂಲಿ ಪ್ರಕರಣಕ್ಕೆ ಎಸ್‌ಪಿ ಕಠಿಣ ಕ್ರಮ!