'ಬಿಜೆಪಿಗೆ ಅವಕಾಶ ಕೊಡದೇ ದೇವೇಗೌಡ್ರೇ ಕಾಂಗ್ರೆಸ್‌ ಮುಕ್ತ ಮಾಡ್ತಾರೆ'

Published : Oct 23, 2018, 09:57 AM IST
'ಬಿಜೆಪಿಗೆ ಅವಕಾಶ ಕೊಡದೇ ದೇವೇಗೌಡ್ರೇ ಕಾಂಗ್ರೆಸ್‌ ಮುಕ್ತ ಮಾಡ್ತಾರೆ'

ಸಾರಾಂಶ

'ಬಿಜೆಪಿಗೆ ಅವಕಾಶ ಕೊಡದೇ ದೇವೇಗೌಡ್ರೇ ಕಾಂಗ್ರೆಸ್‌ ಮುಕ್ತ ಮಾಡ್ತಾರೆ' ಹೀಗಂತಾ ಹೇಳಿದ್ಯಾರು? ಇಲ್ಲಿದೆ ವಿವರ

 ಬೆಂಗಳೂರು. [ಅ.23]: ರಾಜ್ಯವನ್ನು ಕಾಂಗ್ರೆಸ್‌ ಮುಕ್ತ ಮಾಡಲು ಬಿಜೆಪಿಗೆ ಅವಕಾಶ ಸಿಗುವುದಿಲ್ಲ, ಆ ಕೆಲಸವನ್ನು ದೇವೆಗೌಡರು ಮತ್ತು ಜೆಡಿಎಸ್‌ನವರೇ ಮಾಡಿ ಮುಗಿಸುತ್ತಾರೆ ಎಂದು ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸೋಮವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶತಮಾನದ ಇತಿಹಾಸ ಇರುವ ಕಾಂಗ್ರೆಸ್‌ ಪಕ್ಷ ಲೋಕಸಭಾ ಉಪ ಚುನಾವಣೆಯಲ್ಲಿ ಜೆಡಿಎಸ್‌ ಮುಂದೆ ತಲೆ ತಗ್ಗಿಸಿದೆ. ಇದು ಕಾಂಗ್ರೆಸ್‌ ಪಾಲಿಗೆ ಧೃತರಾಷ್ಟಆಲಿಂಗನವಾಗಲಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ಪೂರ್ಣ ಶಕ್ತಿ ತೊಡಗಿಸಿಕೊಂಡಿದೆ. ಆದ್ದರಿಂದ ಬಿಜೆಪಿಯ ಗೆಲುವಿನ ಓಟ ತಡೆಯಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಇನ್ನಿಲ್ಲದ ಕಸರತ್ತು ಮಾಡುತ್ತಿವೆ. ಅದಕ್ಕಾಗಿಯೇ ಬದ್ಧ ವೈರಿಗಳಾದ ಸಿದ್ದರಾಮಯ್ಯ ಮತ್ತು ಎಚ್‌.ಡಿ.ದೇವೆಗೌಡ ಪ್ರಥಮ ಬಾರಿಗೆ ಜಂಟಿ ಸುದ್ದಿಗೋಷ್ಠಿಯನ್ನೂ ನಡೆಸಿದ್ದಾರೆ ಎಂದು ಟೀಕಿಸಿದರು.

ವಿಧಾನಸಭೆಯಲ್ಲಿ ಮಂತ್ರಿಗಳೇ ಇಲ್ಲ, ಮಂತ್ರಿಗಳು ತಂತಮ್ಮ ಜಿಲ್ಲೆಗಳಿಗೂ ಹೋಗುತ್ತಿಲ್ಲ, ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎನ್ನುವ ಒಂದೇ ಉದ್ದೇಶದಿಂದ ಎಲ್ಲಾ ಮಂತ್ರಿಗಳು ಚುನಾವಣೆ ನಡೆಯುತ್ತಿರುವ 5 ಲೋಕಸಭಾ ಕ್ಷೇತ್ರಗಳಿಗೆ ಹೋಗಿ ಕುಳಿತಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಆಡಳಿತವೇ ಇಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕೋಟ ಅಸಮಾಧಾನ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!
ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!