
ಚಿಕ್ಕಬಳ್ಳಾಪುರ(ಅ. 01): ಮಾಜಿ ಪ್ರಧಾನಿ ದೇವೇಗೌಡರ ಹೆಲಿಪ್ಯಾಡ್'ಗೆ ನಾಯಿ ಅಡ್ಡಿಬಂದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಗರದ ಹೊರವಲಯದಲ್ಲಿರುವ ಎಸ್'ಜೆಸಿಐಟಿ ಕಾಲೇಜು ಆವರಣದಲ್ಲಿ ಹೆಲಿಪ್ಯಾಡ್ ಲ್ಯಾಂಡ್ ಆಗುತ್ತಿದ್ದಂತೆ ಅಲ್ಲೇ ಪಕ್ಕದಲ್ಲಿದ್ದ ನಾಯಿಯೊಂದು ಅಡ್ಡ ಬಂದಿದೆ. ಬಳಿಕ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ನಾಯಿಯನ್ನು ಓಡಿಸಲು ಹರಸಾಹಸ ಪಟ್ಟರು.
ಇದೇ ವೇಳೆ, ಮಾಧ್ಯಮಗಳೊಂದಿಗೆ ಮಾತನಾಡಿದ ದೇವೇಗೌಡರು, ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವನ್ನು ಉಳಿಸಬೇಕೆಂದು ಜನರೇ ತೀರ್ಮಾನಿಸಿದ್ದಾರೆ. ಕಾಂಗ್ರೆಸ್ ಬಿಜೆಪಿ ಪಕ್ಷಗಳ ನಡುವೆ ನಮ್ಮ ಪಕ್ಷ ಹೇಗೆ ಮುನ್ನಡೆಯುತ್ತೆ ಎಂಬುದು ಸದ್ಯದಲ್ಲೆ ರಾಜ್ಯದ ಜನತೆಗೆ ಗೊತ್ತಾಗಲಿದೆ ಎಂದರು. ಇನ್ನು, ಪಕ್ಷದ ಕಾರ್ಯಕರ್ತರ ಮದುವೆ ಸಮಾರಂಭಕ್ಕೆ ಬಂದಿದ್ದ ದೇವೇಗೌಡರು ವಾಪಸ್ಸು ಹೆಲಿಪ್ಯಾಡ್ ಮೂಲಕ ಶ್ರವಣಬೆಳಗೊಳಕ್ಕೆ ಹೋದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.