ತಮಿಳುನಾಡಿಗೆ ನೀರು ಬಿಡಲು ಹೇಳಿದ್ದೆ ಅಂತಾರೆ ದೇವೇಗೌಡರು, ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ ಯಾಕೆ..?

Published : Sep 11, 2016, 10:34 AM ISTUpdated : Apr 11, 2018, 12:47 PM IST
ತಮಿಳುನಾಡಿಗೆ ನೀರು ಬಿಡಲು ಹೇಳಿದ್ದೆ ಅಂತಾರೆ ದೇವೇಗೌಡರು, ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ ಯಾಕೆ..?

ಸಾರಾಂಶ

ದೇವೇಗೌಡರೇ ನೀರು ಬಿಡಿ ಎಂದ ಮೇಲೆ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸೋದ್ಯಾಕೆ?

ಮಂಡ್ಯ(ಸೆ.11): ಕಾವೇರಿ ನದಿ ನೀರು ವಿಚಾರದಲ್ಲಿ ಜೆಡಿಎಸ್ ದ್ವಂದ್ವ ನಿಲುವು ಪ್ರದರ್ಶಿಸುತ್ತಿದೆಯಾ..? ಹೌದು, ಎನ್ನುವಂತಿದೆ ದೇವೇಗೌಡರ ಇಂದಿನ ಹೇಳಿಕೆ. ತಮಿಳುನಾಡಿಗೆ ನೀರು ಬಿಡಲು ನಾನೇ ಹೇಳಿದ್ದೆ ಎಂದು ಕೆಆರ್`ಎಸ್ ಭೇಟಿ ಸಂದರ್ಭ ಮಾಜಿ ಪ್ರಧಾನಿ ದೇವೇಗೌಡರು ಹೇಳಿಕೆ ನೀಡಿದ್ದಾರೆ.

ನೀರು ಬಿಡುವುದಕ್ಕೆ ನೀವೇ ಹೇಳಿ, ನಿಮ್ಮ ಶಾಸಕರು, ಸಂಸದರು ಮಂಡ್ಯ ಜಿಲ್ಲಾದ್ಯಂತ  ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದ್ಯಾಕೆ..? ನೀರು ಬಿಡಿ ಎಂದ ಮೇಲೆ, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸೋದ್ಯಾಕೆ? ಜೆಡಿಎಸ್ ಸಂಸದ ಪುಟ್ಟರಾಜು ನೇತೃತ್ವದಲ್ಲಿ ಸರಣಿ ಪ್ರತಿಭಟನೆ ನಡೆಯುತ್ತಿದೆ. ಹಾಗಾದರೆ, ಕಾವೇರಿ ವಿಚಾರದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ದ್ವಂದ್ವ ನಿಲುವು ಪ್ರದರ್ಶಿಸುತ್ತಿದ್ದಾರಾ..? ಕಾವೇರಿ ವಿಷಯದಲ್ಲಿ ರೈತರನ್ನು ಮನವೊಲಿಸಲು ಮಣ್ಣಿನ ಮಗನಿಗೆ ಸಾಧ್ಯವಿಲ್ಲವೇ? ನೀರು ಬಿಡುವುದರ ಅನಿವಾರ್ಯತೆಯನ್ನು ರೈತರಿಗೆ ವಿವರಿಸಬೇಕಿತ್ತಲ್ಲವೇ? ಬಂದ್​, ಗಲಾಟೆಯಿಂದ ರೈತರಿಗೇ ಆಗುವ ನಷ್ಟವನ್ನು ತಪ್ಪಿಸಬಹುದಿತ್ತಲ್ಲವೇ? ‘ರಾಜಕಾರಣ’ವನ್ನು ಅರಿಯದ ಮುಗ್ಧ ರೈತರಿಗೆ ಅರಿವು ಮೂಡಿಸಬಹುದಿತ್ತಲ್ಲವೇ? ಎಂಬ ಪ್ರಶ್ನೆಗಳು ಎದ್ದಿವೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಾಟ್ಸಾಪ್ ಬಳಕೆದಾರರೇ ಎಚ್ಚರ: ಈ ಮೂರು ತಪ್ಪುಗಳು ಮಾಡಿದ್ರೆ ಜೈಲು ಪಾಲಾಗೋದು ಫಿಕ್ಸ್!
10 ಸಾವಿರವಲ್ಲ, 1 ಲಕ್ಷ ಕೊಟ್ರೂ ಮುಸ್ಲಿಮರು ನನಗೆ ವೋಟ್‌ ಹಾಕೋದಿಲ್ಲ: ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮ