
ವಿಧಾನಸೌಧ(ಸೆ.21): 20 ವರ್ಷಗಳ ಬಳಿಕ ಮಣ್ಣಿನ ಮಗ ಮಾಜಿ ಪ್ರಧಾನಿ ದೇವೇಗೌಡರು ಕಾವೇರಿಗಾಗಿ ಇವತ್ತು ಸರ್ವಪಕ್ಷ ಸಭೆಗೆ ಹಾಜರಾಗಿದ್ದಾರೆ. ಸಿಎಂ ಆಹ್ವಾನದ ಹಿನ್ನೆಲೆಯಲ್ಲಿ ಸಭೆಗೆ ಬಂದ ಗೌಡರು, ತಕ್ಷಣ ಅಧಿವೇಶನ ಕರೆದು ತೀರ್ಮಾನ ಕೈಗೊಳ್ಳುವಂತೆ ಸಲಹೆ ಕೊಟ್ಟಿದ್ದಾರೆ.
ಇದೇವೇಳೆ, ಸರ್ವಪಕ್ಷ ಸಭೆಗೆ ಬಿಜೆಪಿ ನಾಯಕರ ಗೈರು ಕುರಿತಂತೆ ತೀವ್ರ ವಾಗ್ದಾಳಿ ನಡೆಸಿದ ದೇವೇಗೌಡರು, ಪ್ರಧಾನಿ ಮಧ್ಯಸ್ಥಿಕೆ ಸಾಧ್ಯವಿಲ್ಲ ಅನ್ನೋದು ಸರಿಯಲ್ಲ. ಅದು ಬೇಜವಬ್ದಾರಿತನವಾಗುತ್ತದೆ, ಇಂತಹ ಸಂದರ್ಭದಲ್ಲಿ ಐಕ್ಯತೆಯಿಂದಿರಬೇಕು ಎಂದು ತಿಳಿ ಹೇಳಿದರು. ಪ್ರಧಾನಿ ಮಧ್ಯಸ್ಥಿಕೆಗೆ ಸಚಿವರ ಮನೆ ಬಾಗಿಲಿಗೆ ಹೋಗಲೂ ಸಿದ್ಧ ಎಂದು ಗೌಡರು ತಿಳಿಸಿದ್ದಾರೆ.
ಸರ್ವಪಕ್ಷ ಸಭೆಯಲ್ಲಿ ಅರ್ಧ ಗಂಟೆ ಕಾಲ ಮಾತನಾಡಿದ ದೇವೇಗೌಡರು, ನಾರಿಮನ್ ಅವರು ಒಳ್ಳೆಯ ರೀತಿಯಲ್ಲೇ ವಾದ ಮಾಡಿದ್ದಾರೆ. ನಾರಿಮನ್ ವಾದದ ಬಗ್ಗೆ ಯಾರಿಗೂ ಅನುಮಾನ ಬೇಕಿಲ್ಲ , ನಾವೆಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡೋಣ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.