
ಮೈಸೂರು (ಅ.29): ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿ ಗರ್ಭಗುಡಿ ಬಾಗಿಲಿಗೆ ಭಕ್ತರೊಬ್ಬರು ಚಿನ್ನದ ಬಾಗಿಲು ಅರ್ಪಿಸಿದ್ದಾರೆ.
ನವದುರ್ಗೆಯರ ಚಿನ್ನದ ಪಟ್ಟಿ ಬಾಗಿಲನ್ನು ಭಕ್ತರೊಬ್ಬರು ಅರ್ಪಿಸಿದ್ದಾರೆ. ಬೆಂಗಳೂರು ಮೂಲದ ವಕೀಲ ಜಯಶ್ರೀ ಶ್ರೀಧರ್ ಎಂಬುವರು ತಾಯಿ ಚಾಮುಂಡೇಶ್ವರಿ ಗರ್ಭಗುಡಿಗೆ ಬಾಗಿಲಿಗೆ ಕೋಟ್ಯಂತರ ರೂ. ಮೌಲ್ಯದ ನವದುರ್ಗೆಯರ ಚಿನ್ನದ ಪಟ್ಟಿ ಬಾಗಿಲನ್ನು ಅರ್ಪಿಸಿದರು. ಚಾಮುಂಡೇಶ್ಚರಿ ಬಳಿ ಹರಕೆ ಹೊತ್ತುಕೊಂಡಿದ್ದ ಜಯಶ್ರೀ ಶ್ರೀಧರ್, ಇಷ್ಟಾರ್ಥ ಈಡೇರಿದ ಹಿನ್ನೆಲೆಯಲ್ಲಿ ಬಾಗಿಲು ಮಾಡಿಸಲು ಎರಡು ವರ್ಷಗಳ ಹಿಂದೆಯೇ ಅನುಮತಿ ಪಡೆದುಕೊಂಡಿದ್ದರು. ನವದುರ್ಗೆಯರ ಚಿನ್ನದ ಪಟ್ಟಿ ಬಾಗಿಲು ಸಂಪೂರ್ಣಗೊಂಡ ನಂತರ ದೇವಸ್ಥಾನ ಗರ್ಭಗುಡಿ ಬಾಗಿಲಿಗೆ ಅರ್ಪಿಸಿ ಭಕ್ತಿ ಮೆರೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.