
ಕುಣಿಗಲ್ : ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳು ಶೀಘ್ರ ಗುಣಮುಖರಾಗಲಿ ಎಂದು ಆಶಿಸಿ ನೂರಾರು ಭಕ್ತರು ಕಗ್ಗೆರೆ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದರು.
ಬಳಿಕ ಸಿದ್ದಲಿಂಗೇಶ್ವರ ಶತಮಾನೋತ್ಸವ ಸಮಿತಿ ಸದಸ್ಯರು ಅಭಿಷೇಕದ ನಂತರ ಚೆನ್ನೈಗೆ ಪ್ರಸಾದ ಕೊಂಡೊಯ್ದರು. ಸಿದ್ದಲಿಂಗೇಶ್ವರನ ಮುಂದೆ ಡಾ. ಶಿವಕುಮಾರಸ್ವಾ ಸ್ವಾಮೀಜಿ ಅವರ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಿ ಶ್ರೀಗಳು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದರು.
ಐವತ್ತೈದು ಲೀಟರ್ ಹಾಲು, ಎಳನೀರು ಕಬ್ಬು, ದ್ರಾಕ್ಷಿ ಸೇರಿದಂತೆ ಹಲವಾರು ದ್ರವ್ಯ ಉಪಯೋಗಿಸಿ ರುದ್ರಾಭಿಷೇಕ ನೆರವೇರಿಸಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.