
ಬೆಂಗಳೂರು(ಜ.31): ಡಿಜಿಪಿ ಒಂ ಪ್ರಕಾಶ್ ಅವರು ಇಂದು ನಿವೃತ್ತಿಯಾಗಲಿದ್ದು, ಇಂದೇ ನೂತನ ಡಿಜಿ ಅಂಡ್ ಐಜಿಪಿ ನೇಮಕ ಕೂಡ ಆಗಲಿದೆ. ಈಗಾಗಲೇ ರಾಜ್ಯ ಸರ್ಕಾರ ರೂಪಕ್ ಕುಮಾರ್ ದತ್ತಾ ಅವರ ನೇಮಕಕ್ಕೆ ಒಲವು ತೋರಿದ್ದು, ಕೇಂದ್ರ ಸೇವೆಯಿಂದ ಬಿಡುಗಡೆ ಗೊಳಿಸುವಂತೆ ಪತ್ರ ಬರೆದಿದೆ.
ಇಂದು ಮಧ್ಯಾಹ್ನದ ವೇಳೆಗೆ ಸರ್ಕಾರ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದ್ದು, ರೂಪಕ್ ಕುಮಾರ್ ದತ್ತ ಅವರೇ ಡಿಜಿ ಅಂಡ್ ಐಜಿಪಿ ಆಗಲಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಪ್ರಧಾನ ಕಚೇರಿಯಲ್ಲಿ ಸಂಜೆ 4.30ರ ಸಮಾರಿಗೆ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದ್ದು, ನೂತನ ಡಿಜಿ - ಐಜಿಪಿಗೆ ಓಂಪ್ರಕಾಶ್ ಅಧಿಕಾರಿ ಹಸ್ತಾಂತರಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.