
ಬೆಂಗಳೂರು(ಜು.17): ಪರಪ್ಪನ ಅಗ್ರಹಾರದ ನೈಜತೆ ಬಹಿರಂಗಪಡಿಸಿದ ಬಂದೀಖಾನೆ ಡಿಜಿಪಿ ಡಿ. ರೂಪಾ ಸೇರಿದಂತೆ ಒಟ್ಟು ಐವರು ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಎತ್ತಂಗಡಿ ಶಿಕ್ಷೆ ನೀಡಿದೆ.
ಬಂದೀಖಾನೆ ಡಿಜಿಪಿ ಹುದ್ದೆಯಲ್ಲಿದ್ದ ಡಿ. ರೂಪಾ ಅವರು ಕೆಲ ದಿನಗಳ ಹಿಂದಷ್ಟೇ ಪರಪ್ಪನ ಅಗ್ರಹಾರದಲ್ಲಿರುವ ವಾಸ್ತವತೆಯನ್ನು ಬಹಿರಂಗಗೊಳಿಸಿದ್ದರು. ಈ ವಿಚಾರ ದೇಶದಾದ್ಯಂತ ಸಂಚಲನ ಮೂಡಿಸಿತ್ತು. ಇದೀಗ ಈ ಬೆಳವಣಿಗೆಗಳ ಹಿಂದೆಯೇ ಅವರನ್ನು ಏಕಾಏಕಿ ಟ್ರಾಫಿಕ್ ಅಮಿಷನರ್ ಆಗಿ ಅವರನ್ನು ಟ್ರಾನ್ಸ್ಫರ್ ಮಾಡಲಾಗಿದೆ.
ಇಷ್ಟೇ ಅಲ್ಲದೆ ಬಂದೀಖಾನೆ ಡಿಜಿಪಿ ಸತ್ಯನಾರಾಯಣರಾವ್ ಅವರನ್ನೂ ಎತ್ತಂಗಡಿ ಮಾಡಲಾಗಿದ್ದು, ಅವರಿಗೆ ಯಾಔಉದೇ ಬಸಲಿ ಹುದ್ದೆ ನೀಡಿಲ್ಲ. ಇದರೊಂದಿಗೆ ಎಂ. ಎನ್ ರೆಡ್ಡಿ ಅವರಿಗೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ವರ್ಗಾವಣೆ ಮಾಡಿದ್ದರೆ, ಮೇಘರಿಕ್'ರನ್ನು ಬಂದೀಖಾನೆಯ ಎಡಿಜಿಪಿಯಾಗಿ ವರ್ಗಾಯಿಸಲಾಗಿದೆ. ಎ. ಎಸ್. ಎನ್ ಮೂರ್ತಿಯವರನ್ನು ಫಾರೆಸ್ಟ್ ಸೆಲ್'ನ ಎಡಿಜಿಪಿಯಾಗಿ ವರ್ಗಾವಣೆ ಮಾಡಿದ್ದರೆ ಅಮೃತ್'ಪಾಲ್'ರನ್ನು ಗುಪ್ತಚರ ಇಲಾಖೆಯ ಡಿಜಿಪಿಯಾಗಿ ವರ್ಗಾಯಿಸಲಾಗಿದೆ ಎಂದು ದಾಖಲೆಗಳಿಂದ ಬಯಲಾಗಿದೆ.
ರಾಜ್ಯ ಸರ್ಕಾರ ಹೊರಡಿಸಿರುವ ಈ ದಾಖಲೆಗಳ ಪ್ರತಿ ಸುವರ್ಣ ನ್ಯೂಸ್'ಗೆ ಲಭ್ಯವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.