
ಬೆಂಗಳೂರು(ಜು.26): ತಮ್ಮ ವಿರುದ್ಧ ಲಂಚದ ಆರೋಪ ಮಾಡಿರುವ ಡಿಐಜಿ ಡಿ.ರೂಪ ಅವರಿಗೆ ಕಾರಾಗೃಹ ಡಿಜಿಪಿ ಸತ್ಯನಾರಾಯಣ್ ರಾವ್ ಅವರು ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಮೂರು ದಿನಗಳಲ್ಲಿ ಬೇಷಾರತ್ ಕ್ಷಮೆ ಕೇಳದಿದ್ದರೆ 50 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ನೋಟಿಸ್'ನಲ್ಲಿ ಎಚ್ಚರಿಕೆ ನೀಡಲಾಗಿದೆ. ಹಿರಿಯ ವಕೀಲ ರಮೇಶ್ ಪುತ್ತಿಗೆ ಅವರ ಮೂಲಕ ನೋಟಿಸ್ ಕಳುಹಿಸಿದ್ದಾರೆ.
ಸತ್ಯನಾರಾಯಣ್ ಅವರು ಶಶಿಕಲಾ ಹಾಗೂ ಮತ್ತು ಹಲವು ಕೈದಿಗಳಿಗೆ ಲಂಚ ಪಡೆದು ರಾಜಾಥಿತ್ಯ ನೀಡಿದ್ದರು ಎಂದು ಡಿ.ರೂಪ ಆರೋಪಿಸುವುದರ ಜೊತೆಗೆ ಮೇಲಧಿಕಾರಿಗಳಿಗೂ ಪತ್ರ ಬರೆದಿದ್ದರು. ಇದು ದೇಶಾದ್ಯಂತ ಭಾರಿ ಸುದ್ದಿಯಾಗಿತ್ತು. ಆರೋಪಕ್ಕೆ ಪೂರಕವೆಂಬಂತೆ ದೃಶ್ಯಗಳು ಹಾಗೂ ಭಾವಚಿತ್ರಗಳು ಬಿಡುಗಡೆಯಾಗಿದ್ದವು. ತದ ನಂತರ ರೂಪ ಅವರನ್ನು ಟ್ರಾಫಿಕ್ ಇಲಾಖೆಯ ಆಯುಕ್ತರನ್ನಾಗಿ ಹಾಗೂ ಸತ್ಯನಾರಾಯಣ್ ಅವರನ್ನು ರಜೆಯ ಮೇಲೆ ತೆರಳುವಂತೆ ಸರ್ಕಾರ ಆದೇಶಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.