ಡಿಜಿಪಿ ಸತ್ಯನಾರಾಯಣಗೆ ನಿವೃತ್ತಿ ದಿನ ಹುದ್ದೆ ಭಾಗ್ಯ!

Published : Aug 01, 2017, 10:12 AM ISTUpdated : Apr 11, 2018, 12:51 PM IST
ಡಿಜಿಪಿ ಸತ್ಯನಾರಾಯಣಗೆ ನಿವೃತ್ತಿ ದಿನ ಹುದ್ದೆ ಭಾಗ್ಯ!

ಸಾರಾಂಶ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ವಿಶೇಷ ಸವಲತ್ತು ಒದಗಿಸಿದ ಆರೋಪದ ಹಿನ್ನೆಲೆಯಲ್ಲಿ ಕಡ್ಡಾಯ ರಜೆಯ ಮೇಲೆ ತೆರಳಿದ್ದ ಡಿಜಿಪಿ ಎಚ್.ಎನ್. ಸತ್ಯನಾರಾಯಣ ರಾವ್ ಅವರಿಗೆ ಸರ್ಕಾರವು ನಿವೃತ್ತಿಯ ದಿನದಂದೇ ಹುದ್ದೆ ಕಲ್ಪಿಸಿದೆ.

ಬೆಂಗಳೂರು(ಜು.01): ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ವಿಶೇಷ ಸವಲತ್ತು ಒದಗಿಸಿದ ಆರೋಪದ ಹಿನ್ನೆಲೆಯಲ್ಲಿ ಕಡ್ಡಾಯ ರಜೆಯ ಮೇಲೆ ತೆರಳಿದ್ದ ಡಿಜಿಪಿ ಎಚ್.ಎನ್. ಸತ್ಯನಾರಾಯಣ ರಾವ್ ಅವರಿಗೆ ಸರ್ಕಾರವು ನಿವೃತ್ತಿಯ ದಿನದಂದೇ ಹುದ್ದೆ ಕಲ್ಪಿಸಿದೆ.

ಪೊಲೀಸ್ ಸೇವೆಯಿಂದ ಸೋಮವಾರ ಸತ್ಯನಾರಾಯಣ ರಾವ್ ಅವರು ನಿವೃತ್ತಿಯಾದರು. ಇದಕ್ಕೂ ಮುನ್ನ ತಾಂತ್ರಿಕ ಕಾರಣಕ್ಕಾಗಿ ಅಗ್ನಿಶಾಮಕ ಮತ್ತು ಗೃಹರಕ್ಷಕ ದಳದ ಡಿಜಿಪಿಯಾಗಿ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರವು ಸೋಮವಾರ ಆದೇಶ ಹೊರಡಿಸಿತು. ಸತ್ಯನಾರಾಯಣ ಅವರು ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ನಿವೃತ್ತಿಗೊಂಡರು.

ಸೋಮವಾರ ಸಂಜೆ ಸೇವೆಯಿಂದ ನಿರ್ಗಮಿಸಿದ್ದು, ಅಗ್ನಿ ಶಾಮಕ ದಳ ಪ್ರಭಾರಿಯಾಗಿದ್ದ ಪೊಲೀಸ್ ಅಧಿಕಾರಿ ನೀಲಮಣಿ ರಾಜು ಅವರು ಮಂಗಳವಾರದಿಂದ ಪೂರ್ಣಪ್ರಮಾಣದ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಸತ್ಯನಾರಾಯಣರಾವ್ ಅವರಿಗೆ ‘ವಿಷ್ಯದಲ್ಲಿ ಸರ್ಕಾರಿ ಸವಲತ್ತುಗಳು ಪಡೆಯಲು ಸಮಸ್ಯೆಯಾಗಬಾರದು ಎಂಬ ಕಾರಣಕ್ಕಾಗಿ ನಿವೃತ್ತಿಗೂ ಮುನ್ನ ಹುದ್ದೆ ಕಲ್ಪಿಸಲಾಯಿತು ಎಂದು ಹೇಳಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ