'ಭಗವಾನ್‌ರನ್ನ ಒದ್ದು‌ ಒಳಗೆ ಹಾಕಿ'

Published : Oct 06, 2018, 05:08 PM ISTUpdated : Oct 06, 2018, 05:21 PM IST
'ಭಗವಾನ್‌ರನ್ನ ಒದ್ದು‌ ಒಳಗೆ ಹಾಕಿ'

ಸಾರಾಂಶ

ವಿಚಾರವಾದಿ ಕೆ.ಎಸ್. ಭಗವಾನ್ ಹೇಳಿಕೆಗೆ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.

ಧಾರವಾಡ, [ಅ.06]:  ಮೈಸೂರು ದಸರಾ ಬಗ್ಗೆ ವಿಚಾರವಾದಿ ಕೆ.ಎಸ್. ಭಗವಾನ್ ಹೇಳಿಕೆಗೆ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.

ಧಾರವಾಡದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ,  ದಸರಾ ಆಚರಣೆ ಶೋಷಣೆ ಎಂದಿದ್ದ ಭಗವಾನ್ ಮೇಲೆ ಈ ಕೂಡಲೇ‌ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಭಗವಾನ್ ಮತ್ತು ಪ್ರಕಾಶ ರೈ ಹುಚ್ಚುಚ್ಚಾಗಿ ಮಾತಾಡ್ತಾ ಇದ್ದಾರೆ. ಹೀಗೆ ಮಾತಾಡೋರನ್ನು ಒದ್ದು‌ ಒಳಗೆ ಹಾಕಬೇಕು. ಅವರಿಗೆ ಯಾವುದೇ ಸಾಮಾಜಿ‌ಕ ಕಾಳಜಿ‌ ಇಲ್ಲ. ಅವರಿಗೆ ನಂಬಿಕೆಗಳು ಇಲ್ಲವಾದರೆ ಬಾಯಿ‌‌ ಮುಚ್ಚಿಕೊಂಡು ಬಿದ್ದರಬೇಕು. ಮತ್ತೊಬ್ಬರ ನಂಬಿಕೆ ಬಗ್ಗೆ ಯಾಕೆ ಮಾತನಾಡಬೇಕು ಆಕ್ರೋಶ ವ್ಯಕ್ತಪಡಿಸಿದರು. 

ಮಹಿಷಾ ಪರ ನಿಂತ ಭಗವಾನ್; ಭಗವಾನ್ ವಿರುದ್ಧ ತಿರುಗಿ ಬಿದ್ದ ಭಕ್ತರು!

ಅವರಿಬ್ಬರೂ ಪ್ರಚಾರದ ತೆವಲಿನಿಂದ ಮಾತಾಡ್ತಾ ಇದ್ದಾರೆ. ಅವರಿಗೆ ಧೈರ್ಯ ಇದ್ದರೆ ಬೇರೆ ಧರ್ಮದ ಬಗ್ಗೆ ಮಾತಾಡಲಿ ಎಂದು ಪ್ರಹ್ಲಾದ್ ಜೋಶಿ ಕೆಂಡಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!