ಕಾವೇರಿ ವಿವಾದಕ್ಕೆ ಮಾತುಕತೆಯೇ ಪರಿಹಾರ: ರಮ್ಯಾ

Published : Oct 17, 2016, 04:32 AM ISTUpdated : Apr 11, 2018, 12:44 PM IST
ಕಾವೇರಿ ವಿವಾದಕ್ಕೆ ಮಾತುಕತೆಯೇ ಪರಿಹಾರ: ರಮ್ಯಾ

ಸಾರಾಂಶ

ಸುಪ್ರೀಂ ಕೋರ್ಟ್ ತೀರ್ಪು ನೀಡುವಾಗ  ಮೂಲ ಒಪ್ಪಂದವನ್ನು ಆಧಾರವಾಗಿಟ್ಟುಕೊಳ್ಳುವುದರಿಂದ ಮೂಲ ಒಪ್ಪಂದದಲ್ಲಿಯೇ ತಿದ್ದುಪಡಿ ಆಗಬೇಕು ಎಂಬ ಅಭಿಪ್ರಾಯವನ್ನು ಮಾಜಿ ಸಂಸದೆ ರಮ್ಯಾ ವ್ಯಕ್ತಪಡಿಸಿದ್ದಾರೆ

ತಲಕಾವೇರಿ (ಅ.17): ಕಾವೇರಿ ನದಿ ನೀರು ಹಂಚಿಕೆ ವಿವಾದ ಬಗೆಹರಿಯಬೇಕಿದ್ದರೆ ಮೂಲ ಒಪ್ಪಂದದಲ್ಲಿಯೆ ಬದಲಾವಣೆ ಆಗಬೇಕು, ಅದಕ್ಕಾಗಿ ಎರಡು ರಾಜ್ಯಗಳು ಮಾತುಕತೆ ನಡೆಸಬೇಕೆಂದು ಮಾಜಿ ಸಂಸದೆ ರಮ್ಯಾ ಹೇಳಿದ್ದಾರೆ.

ತಲಕಾವೇರಿ ತೀರ್ಥೊದ್ಬವ ವೀಕ್ಷಣೆಗೆ ಆಗಮಿಸಿದ್ದ ರಮ್ಯಾ, ಸುಪ್ರೀಂ ಕೋರ್ಟ್ ತೀರ್ಪು ನೀಡುವಾಗ  ಮೂಲ ಒಪ್ಪಂದವನ್ನು ಆಧಾರವಾಗಿಟ್ಟುಕೊಳ್ಳುವುದರಿಂದ ಮೂಲ ಒಪ್ಪಂದದಲ್ಲಿಯೇ ತಿದ್ದುಪಡಿ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ಆ ನಿಟ್ಟಿನಲ್ಲಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಮುಖಾಮುಖಿ ಕೂರಿಸಿ ಮಾತುಕತೆ ನಡೆಸುವ ಕೆಲಸ ಮಾಡಬೇಕು ಎಂದು ರಮ್ಯಾ ಹೇಳಿದ್ದಾರೆ.

ಪ್ರಾಕೃತಿಕ ಸಂಪನ್ಮೂಲಗಳನ್ನು ಮಿತವಾಗಿ ಬಳಸಿಕೊಂಡು ಉಳಿಸಿಕೊಳ್ಳುವ ಜವಾಬ್ದಾರಿಯನ್ನು ಎಲ್ಲರೂ ನಿಭಾಯಿಸಬೇಕೆಂದು ಅವರು ಈ ಸಂದರ್ಭದಲ್ಲಿ ಕರೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್