ಅರಸು ಕುಟುಂಬ ಏಳಿಗೆ ಕಾಣದಿರಲು ಬ್ರಾಹ್ಮಣ ಹೆಣ್ಣು ಮಕ್ಕಳ ಕಣ್ಣೀರು ಕಾರಣ?

Published : Feb 25, 2018, 01:43 PM ISTUpdated : Apr 11, 2018, 12:35 PM IST
ಅರಸು ಕುಟುಂಬ ಏಳಿಗೆ ಕಾಣದಿರಲು ಬ್ರಾಹ್ಮಣ ಹೆಣ್ಣು ಮಕ್ಕಳ ಕಣ್ಣೀರು ಕಾರಣ?

ಸಾರಾಂಶ

ಭೂಸುಧಾರಣಾ ಕಾನೂನು ಜಾರಿ ಸಂದರ್ಭದಲ್ಲಿ ಬ್ರಾಹ್ಮಣ ಸಮುದಾಯದ ಭೂಮಿ ಬಿಟ್ಟು ಬೇರೆ ಯಾವ ಸಮುದಾಯ ಭೂಮಿಯನ್ನಾದರೂ ವಶಪಡಿಸಿಕೊಳ್ಳಿ ಎಂದು ಹೇಳಿದ್ದೆ ಆ ಸಮುದಾಯ ಹೆಣ್ಣು ಮಕ್ಕಳ ಕಣ್ಣೀರು ಅರಸು ಕುಟುಂಬವನ್ನು ಕಾಡುತ್ತಿದೆ

ಬೆಂಗಳೂರು: ದೇವರಾಜ ಅರಸು ನಂತರ ತಾವು ಐದು ವರ್ಷ ಪೂರ್ಣಕಾಲ ಆಡಳಿತ ನಡೆಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅರಸು ಅವರ ಕುಟುಂಬ ಏಕೆ ಏಳಿಗೆ ಆಗಲಿಲ್ಲ ಎಂದು ನಮ್ಮ ತಂದೆ ಬಳಿ ಕೇಳಿದೆ. ಅದಕ್ಕೆ ಅವರು ಭೂಸುಧಾರಣಾ ಕಾನೂನು ಜಾರಿ ಸಂದರ್ಭದಲ್ಲಿ ಬ್ರಾಹ್ಮಣ ಸಮುದಾಯದ ಭೂಮಿ ಬಿಟ್ಟು ಬೇರೆ ಯಾವ ಸಮುದಾಯ ಭೂಮಿಯನ್ನಾದರೂ ವಶಪಡಿಸಿಕೊಳ್ಳಿ ಎಂದು ಹೇಳಿದ್ದೆ. ಆದರೂ ಅರಸು ಬ್ರಾಹ್ಮಣರ ಭೂಮಿಯನ್ನೂ ವಶಪಡಿಸಿಕೊಂಡರು. ಆ ಸಮುದಾಯ ಹೆಣ್ಣು ಮಕ್ಕಳ ಕಣ್ಣೀರು ಅರಸು ಕುಟುಂಬವನ್ನು ಕಾಡುತ್ತಿದೆ ಎಂದು ಹೇಳಿದ್ದರು ಎಂದು ಎಚ್..ಡಿ. ಕುಮಾರಸ್ವಾಮಿ ತಮ್ಮ ತಂದೆಯ ಮಾತುಗಳನ್ನು ನೆನಪಿಸಿಕೊಂಡರು.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಬೆಂಗಳೂರು ಮಹಾನಗರ ವಿಪ್ರರ ಬೃಹತ್ ಸಮಾವೇಶ’ವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಮುಂದಿನ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದ್ದು, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬ್ರಾಹ್ಮಣ ಸಮಾಜ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ನಿವಾರಿಸಲು ಬ್ರಾಹ್ಮಣ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗುವುದು. ಜತೆಗೆ ಸಮುದಾಯದ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ