
ಚೆನ್ನೈ(ಜು.19): ತಮಿಳುನಾಡಿನಲ್ಲೀಗ ಮತ್ತೊಂದು ಸುತ್ತಿನ ಸಿನಿಮಾ ನಟರ ರಾಜಕೀಯ ಪ್ರವೇಶ ಆರಂಭವಾಗಿದೆ. ಈಗಾಗಲೇ ಸೂಪರ್'ಸ್ಟಾರ್ ರಜಿನಿಕಾಂತ್ ಶೀಘ್ರದಲ್ಲಿಯೇ ರಾಜಕೀಯ ಕ್ಷೇತ್ರ ಪ್ರವೇಶಿಸುವುದಾಗಿ ಅಧಿಕೃತವಾಗಿ ಘೋಷಿಸಿಯೂ ಆಗಿದೆ.
ಈಗ ಮತ್ತೊಬ್ಬ ಯೂನಿವರ್ಸಲ್ ಸ್ಟಾರ್ ಕಮಲ್ ಹಾಸನ್(62) ತಾವು ಸಹ ರಾಜಕೀಯ ಪ್ರವೇಶದ ಇಂಗಿತವನ್ನು ವ್ಯಕ್ತಪಡಿಸಿದ್ದು, ಟ್ವಿಟರ್'ನಲ್ಲಿ ಅದರ ಸುಳಿವು ನೀಡಿದ್ದಾರೆ. ತಮಿಳು ಪದ್ಯದ ಜೊತೆಗೆ ನಮಗೆ ತೊಂದರೆ ಕೊಟ್ಟರೂ ಸರಿಯೇ ಜನರು ನಿರ್ಧರಿಸಿದ ದಿನದಂದು ನಾವು ಮುಖ್ಯಮಂತ್ರಿಗಳಾಗುತ್ತೇವೆ' ಎಂದು' ಟ್ವಿಟರ್'ನಲ್ಲಿ ಬರೆದುಕೊಂಡಿದ್ದಾರೆ.
ಇತ್ತೀಚೆಗೆ ಅವರು ತಾವು ಆಯೋಜಿಸುವ ತಮಿಳು ‘ಬಿಗ್ ಬಾಸ್’ ರಿಯಾಲಿಟಿ ಶೋನಲ್ಲಿ ರಾಜ್ಯದಲ್ಲಿನ ಭ್ರಷ್ಟಾಚಾರದ ಬಗ್ಗೆ ಮಾತನಾಡಿ ಆಡಳಿತ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.