
ಕೊಡಗು(ಡಿ.23): ಜಿಲ್ಲೆಯ ದಿಡ್ಡಳ್ಳಿ ಆದಿವಾಸಿಗಳ ಪ್ರತಿಭಟನೆ ತಾತ್ಕಾಲಿಕವಾಗಿ ಅಂತ್ಯಗೊಂಡಿದೆ. ಸರ್ಕಾರ ಮೂಲಭೂತ ಸೌಕರ್ಯ ನೀಡಲು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಕಾರರು ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ಅಂತ್ಯಗೊಳಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್. ಆಂಜನೇಯ ಅವರು ಗಿರಿಜನರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು 1 ಕೋಟಿ ರೂ.ಚೆಕ್ ವಿತರಿಸಿದ್ದಾರೆ. ಕೊಡಗು ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ಗೆ ಚೆಕ್ ಹಸ್ತಾಂತರಿಸಿದರು. ಸಚಿವ ಆಂಜನೇಯ ನೇತೃತ್ವದ ಸಂಧಾನ ಸಭೆಯಲ್ಲಿ ರಸ್ತೆ, ಕುಡಿಯುವ ನೀರು, ಶಾಲೆ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿರುವ ನಟ ಚೇತನ್ ಮಾತನಾಡಿ, ದಿಡ್ಡಳ್ಳಿ ಬಿಟ್ಟು ಬೇರೆ ಕಡೆ ಪರ್ಯಾಯ ವ್ಯವಸ್ಥೆ ಮಾಡಲಾಗುವ ಕಾರಣದಿಂದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಗಿರಿಜನರು ಕೈಬಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಕೊಡಗು ಜಿಲ್ಲೆ ದಿಡ್ಡಳ್ಳಿಯಲ್ಲಿ ಗಿರಿಜನರನ್ನು ಒಕ್ಕಲೆಬ್ಬಿಸಿದ ಕಾರಣ ಕಳೆದ ಒಂದು ವಾರದಿಂದ ಗಿರಿಜನರು ಪ್ರತಿಭಟನೆ ನಡೆಸುತ್ತಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.