
ಬೆಂಗಳೂರು (ನ.27): ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಮಹದಾಯಿ ನದಿ ನೀರು ಹಂಚಿಕೆ ವಿವಾದ ವಿಚಾರವಾಗಿ ಇದು ನಡೆದ ಸರ್ವ ಪಕ್ಷ ಸಭೆಯಲ್ಲಿ ಒಮ್ಮತ ಮೂಡದ ಕಾರಣ ಪ್ರಧಾನಿ ಭೇಟಿಗೆ ನಿಯೋಗ ಒಯ್ಯುವ ಬಗ್ಗೆ ಸಿಎಂ ಪ್ರಸ್ತಾಪಿಸಿದ್ದಾರೆ.
ಕಾರ್ಯಕ್ರಮದ ನೆಪವೊಡ್ಡಿ ಸಭೆಯ ಅರ್ಧದಲ್ಲಿಯೇ ಡಿ ವಿ ಸದಾನಂದ ಗೌಡ ಎದ್ದು ಹೊರ ನಡೆದಿದ್ದಾರೆ.
ಗೋವಾ ಸಿಎಂ ಹಿಂದೇಟಿನ ಬಗ್ಗೆ ವಾಕ್ಸಮರ ನಡೆದಿದೆ. ಪ್ರತಿಪಕ್ಷ ನಾಯಕರ ವಿರುದ್ಧ ಎಂ.ಬಿ.ಪಾಟೀಲ್,ವಿನಯ್ ಕುಲಕರ್ಣಿ ಗದಾ ಪ್ರಹಾರ ಮಾಡಿದ್ದಾರೆ.
ಸಮಸ್ಯೆಯತ್ತ ನೀವು ಗಮನಹರಿಸುತ್ತಿಲ್ಲ. ನೀರಿನ ವಿಚಾರದಲ್ಲೂ ರಾಜಕಾರಣ ಮಾಡುತ್ತಿದ್ದೀರ ಎಂದು ವಿನಯ್ ಕುಲಕರ್ಣಿ,ಎಂ.ಬಿ.ಪಾಟೀಲ್ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇಲ್ಲಿ ಕೂತು ರಾಜಕೀಯ ಮಾಡೋದು ಬೇಡ. ಇಲ್ಲಿ ನಾವು ಹೇಗೆ ಒಗ್ಗಟ್ಟಿನಿಂದ ಇದ್ದಿವೋ ಅಲ್ಲಿಯೂ ಹಾಗೆ ಒಗ್ಗಟ್ಟಿನಲ್ಲಿ ಇರೋಕೆ ಹೇಳಿ. ಗೋವಾ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸ್ತಾ ಇದ್ದಾರೆ. ಅವರನ್ನು ಮೊದಲು ಸರಿ ಮಾಡಿ. ಆಮೇಲೆ ಪ್ರಧಾನಿ ಜೊತೆ ಮಾತನಾಡೋಣ. ಅಲ್ಲಿ ಹೋಗಿ ಕೈ ನಾಯಕರ ಜೊತೆ ಮಾತನಾಡಿ. ನಮ್ಮವರ ಜೊತೆ ನಾವು ಮಾತುಕತೆ ಮಾಡ್ತೇವೆ ಎಂದು ಸಭೆಯಲ್ಲಿ ಸದಾನಂದ ಗೌಡ ಸಿಎಂಗೆ ಸಲಹೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.