ಎಂ.ಜಿ ರಸ್ತೆಯಲ್ಲಿ ಯುವಕ-ಯುವತಿಯರಿಗೆ ಪ್ರತ್ಯೇಕ ಪಥ

Published : Dec 26, 2017, 10:50 AM ISTUpdated : Apr 11, 2018, 01:02 PM IST
ಎಂ.ಜಿ ರಸ್ತೆಯಲ್ಲಿ ಯುವಕ-ಯುವತಿಯರಿಗೆ ಪ್ರತ್ಯೇಕ ಪಥ

ಸಾರಾಂಶ

ಕಳೆದ ವರ್ಷ ಹೊಸ ವರ್ಷಾಚರಣೆ ವೇಳೆ ಎಂ.ಜಿ.ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ನಡೆದ ಘಟನೆಯಿಂದ ಎಚ್ಚೆತ್ತಿರುವ ನಗರ ಪೊಲೀಸರು ಈ ಬಾರಿ ಯುವತಿಯರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಪಥ ಕಲ್ಪಿಸಲು ಸಿದ್ಧತೆ ನಡೆಸಿದ್ದಾರೆ. ಎಂ.ಜಿ.ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷದ ಸಂಭ್ರ ಮಾಚರಣೆಗೆ ಸಾವಿರಾರು ಮಂದಿ ಯುವ ಸಮೂಹ ಬರುತ್ತದೆ.

ಬೆಂಗಳೂರು (ಡಿ.26): ಕಳೆದ ವರ್ಷ ಹೊಸ ವರ್ಷಾಚರಣೆ ವೇಳೆ ಎಂ.ಜಿ.ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ನಡೆದ ಘಟನೆಯಿಂದ ಎಚ್ಚೆತ್ತಿರುವ ನಗರ ಪೊಲೀಸರು ಈ ಬಾರಿ ಯುವತಿಯರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಪಥ ಕಲ್ಪಿಸಲು ಸಿದ್ಧತೆ ನಡೆಸಿದ್ದಾರೆ. ಎಂ.ಜಿ.ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷದ ಸಂಭ್ರ ಮಾಚರಣೆಗೆ ಸಾವಿರಾರು ಮಂದಿ ಯುವ ಸಮೂಹ ಬರುತ್ತದೆ.

ಈ ವೇಳೆ ಯುವತಿಯರು ಮತ್ತು ಮಹಿಳೆಯರ ರಕ್ಷಣೆಗೆಂದು ಪ್ರತ್ಯೇಕ ಪಥ ಮಾಡಲಾಗುವುದು ಎಂದು ಅಧಿಕಾರಿಯೊಬ್ಬರು ಹೇಳಿದರು. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಚರ್ಚ್‌ಸ್ಟ್ರೀಟ್‌ನಲ್ಲಿ ಮಹಿಳೆಯರ ರಕ್ಷಣೆ ದೃಷ್ಟಿಯಿಂದ ಈ ರಸ್ತೆಗಳ ಮಧ್ಯೆ ಬ್ಯಾರಿಕೇಡ್‌ಗಳನ್ನು ಹಾಕಿ ಎರಡು ಪಥಗಳನ್ನು ನಿರ್ಮಿಸಲಾಗುತ್ತದೆ. ಶೇ.70ರಷ್ಟು ಸ್ಥಳದಲ್ಲಿ ಪುರುಷರು ಹಾಗೂ ಶೇ.30ರಷ್ಟು ಸ್ಧಳದಲ್ಲಿ ಮಹಿಳೆಯರಿಗೆ ಮೀಸಲಿರಿಸಲಾಗಿದೆ. ಒಂದು ವೇಳೆ ಮಹಿಳೆ ಅಥವಾ ಯುವತಿ, ತಮ್ಮ ಪತಿ ಅಥವಾ ಬಾಯ್

ಫ್ರೆಂಡ್ ಜತೆ ಬಂದು ತಮ್ಮ ಕುಟುಂಬಸ್ಥರ ಜತೆಯೇ ಹೋಗು ತ್ತೇವೆ ಎಂದರೆ ಅಂತಹ ಯುವತಿಯರನ್ನು ಅವರ ಸುಪರ್ದಿಯಲ್ಲಿಯೇ ಕಳುಹಿಸಿ ಕೊಡಲಾಗುವುದು. ಇಲ್ಲದಿದ್ದರೆ ಪ್ರತ್ಯೇಕವಾಗಿ ಕಳುಹಿಸಲಾ ಗುವುದು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ 12 ಅಡಿ ಎತ್ತರದ 15 ವೀಕ್ಷಣಾ ಗೋಪುರಗಳು(ವಾಚ್ ಟವರ್), 500 ಸಿಸಿಟೀವಿ ಕ್ಯಾಮೆರಾ ಗಳು ಹಾಗೂ 200 ಫೋಕಲ್ ಲೈಟ್‌ಗಳ ಅಳವಡಿಕೆ ಮಾಡಲಾ ಗುವುದು ಎಂದು ಅಧಿಕಾರಿ ಮಾಹಿತಿ ನೀಡಿದರು.

ಕಳೆದ ವರ್ಷ ಯುವತಿಯರ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ, ಬೆಂಗಳೂರಿನ ಮಾರ್ಯದೆ ಹಾಳಾಗಿತ್ತು. ಹೀಗಾಗಿ ಎಂ.ಜಿ.ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಹಾಗೂ ಚರ್ಚ್‌ಸ್ಟ್ರೀಟ್‌ನಲ್ಲಿ ಪುರುಷರು ಮತ್ತು ಮಹಿಳೆಯರ ಓಡಾಟಕ್ಕೆ ಪ್ರತ್ಯೇಕ ಪಥ ಮಾಡಲು ಸಿದ್ಧತೆ ನಡೆದಿದೆ. ಹೊಸ ಮಾದರಿಯ ಭದ್ರತೆಗೆ ನಗರ ಪೊಲೀಸ್ ಆಯುಕ್ತರು ಸೂಚಿಸಿದ ನಂತರವೇ ಅನುಷ್ಠಾನಕ್ಕೆ ತರಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!