
ನವದೆಹಲಿ(ಜೂ.15): ಗ್ರಾಮೀಣ ಪ್ರದೇಶಗಳ ಸಂಪರ್ಕಕ್ಕಾಗಿ ಡಿಜಿಟಲ್ ಇಂಡಿಯಾ ಪ್ರಚಾರಾಂದೋಲನವನ್ನು ಆರಂಭಿಸಿದ್ದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಡಿಜಿಟಲ್ ಇಂಡಿಯಾ ಫಲಾನುಭವಿಗಳೊಂದಿಗೆ ಇಂದು ಸಂವಾದ ನಡೆಸಿದ ಅವರು, ದೇಶಾದ್ಯಂತ ಇರುವ ಸಾಮಾನ್ಯ ಸೇವಾ ಕೇಂದ್ರಗಳು ಮಹತ್ವದ ವಿದ್ಯುನ್ಮಾನ ಸೇವೆಗಳನ್ನು ಒದಗಿಸುತ್ತಿದ್ದು, ಹೊಸ ಉದ್ಯೋಗಾವಕಾಶ ಸೃಷ್ಟಿಸುವ ಮೂಲಕ ನಾಗರಿಕರನ್ನು ಬಲವರ್ಧನೆಗೊಳಿಸಲಾಗುತ್ತಿದೆ ಎಂದರು.
ತಂತ್ರಜ್ಞಾನದಿಂದಾಗಿ ರೈಲು ಟಿಕೆಟ್ಗಳನ್ನು ಅಂತರ್ಜಾಲದಲ್ಲಿಯೇ ಬುಕ್ ಮಾಡಬಹುದಾಗಿದೆ. ಬಿಲ್ ಗಳನ್ನು ಆನ್ಲೈನ್ ನಲ್ಲಿಯೇ ಪಾವಸಬಹುದಾಗಿದೆ. ಇವೆಲ್ಲಾವುಗಳಿಂದ ಉತ್ತಮ ಸಂಪರ್ಕ ಏರ್ಪಟ್ಟಿದ್ದು, ಜನರಿಗೆ ತುಂಬಾ ಪ್ರಯೋಜನವಾಗಿದೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು. ತಂತ್ರಜ್ಞಾನ ಸೌಲಭ್ಯಗಳು ಕೆಲವೇ ಆಯ್ದ ವ್ಯಕ್ತಿಗಳಿಗೆ ಸೀಮಿತಗೊಳಿಸಬಾರದು , ಸಮಾಜದ ಎಲ್ಲಾ ವರ್ಗದವರಿಗೂ ದೊರಕುವಂತಾಗಬೇಕು, ಸಾಮಾನ್ಯ ಸೇವಾ ಕೇಂದ್ರಗಳನ್ನು ಸಂಪರ್ಕವನ್ನು ಇನ್ನಷ್ಟು ಬಲಗೊಳಿಸಲಾಗುವುದು ಎಂದು ಮೋದಿ ಭರವಸೆ ನೀಡಿದರು.
ಉತ್ತರ ಪ್ರದೇಶ, ಹರಿಯಾಣ , ರಾಜಸ್ತಾನ, ನಾಗಾಲ್ಯಾಂಡ್, ರಾಜ್ಯಗಳ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದ ಮೋದಿ, ಹೆಚ್ಚಿನ ಡಿಜಿಟಲ್ ಪಾವತಿ ಮೂಲಕ ಗ್ರಾಮಗಳ ಮಟ್ಟದ ಉದ್ಯಮಗಳ ಸಮೂಹವನ್ನು ಸೃಷ್ಟಿಸುತ್ತಿದ್ದು, ಮಧ್ಯವರ್ತಿಗಳನ್ನು ತೆಗೆದುಹಾಕಲಾಗುತ್ತಿದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.