
ನವದೆಹಲಿ(ಮಾ.16): ನ್ಯೂಜಿಲ್ಯಾಂಡ್ ಮಸೀದಿ ದಾಳಿಯನ್ನು ಖಂಡಿಸುವ ನೆಪದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್, ಅನವಶ್ಯಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಎಳೆದು ತಂದಿದ್ದಾರೆ.
ವಿಶ್ವ ಶಾಂತಿಗೆ ಬುದ್ಧ, ಮಹಾವೀರ, ಮಾರ್ಟಿನ್ ಲೂಥರ್ ಕಿಂಗ್, ಮಹಾತ್ಮಾ ಗಾಂಧಿ ಅವರಂತ ನಾಯಕರು ಬೇಕೆ ಹೊರತು, ಹಿಟ್ಲರ್, ಮುಸುಲೋನಿ, ಅಥವಾ ನರೇಂದ್ರ ಮೋದಿ ಅವರಂತ ನಾಯಕರಲ್ಲ ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ನ್ಯೂಜಿಲ್ಯಾಂಡ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 49 ಮಂದಿ ಸಾವನ್ನಪ್ಪಿದ್ದನ್ನು ಖಂಡಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು. ಇದನ್ನು ಬೆಂಬಲಿಸಿ ದಿಗ್ವಿಜಯ್ ಕೂಡ ಟ್ವೀಟ್ ಮಾಡಿದ್ದು, ಮೋದಿ ಅವರನ್ನು ಹಿಟ್ಲರ್ ಮತ್ತು ಮುಸುಲೋನಿಗೆ ಹೋಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.