
ಬೆಂಗಳೂರು(ಏ.29): ಎಐಸಿಸಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ದಿಗ್ವಿಜಯ್ ಸಿಂಗ್'ಗೆ ಕೋಕ್ ನೀಡಲಾಗಿದ್ದು,ನೂತನ ಉಸ್ತುವಾರಿಯನ್ನಾಗಿ ಕೇರಳ ಕಾಂಗ್ರೆಸ್ ಸಂಸದ ಕೆ.ಸಿ. ವೇಣು'ಗೋಪಾಲ್ ಅವರನ್ನು ನೇಮಿಸಲಾಗಿದೆ.
ದಿಗ್ವಿಜಯ್ ಸಿಂಗ್ ಅವರನ್ನು ಗೋವಾ ರಾಜ್ಯದ ಉಸ್ತುವಾರಿ ಸ್ಥಾನದಿಂದಲೂ ತೆಗೆದು ಹಾಕಲಾಗಿದೆ. ರಾಜ್ಯ ವಿಧಾನಸಭಾ ಇನ್ನು ಒಂದು ವರ್ಷವಿರುವುದರಿಂದ ಎಐಸಿಸಿ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಗೋವಾ ಹಾಗೂ ಮಣಿಪುರ ರಾಜ್ಯಕ್ಕೆ ದಿಗ್ವಿಜಯ್ ಅವರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗಿತ್ತು. ಅದಲ್ಲದೆ ಗೋವಾದಲ್ಲಿ ಕಾಂಗ್ರೆಸ್ ಪಕ್ಷ ಅತೀ ಹೆಚ್ಚು ಸ್ಥಾನ ಪಡೆದಿತ್ತು. ಆದರೆ ಉಸ್ತುವಾರಿ ವಹಿಸಿಕೊಂಡಿದ್ದ ದಿಗ್ವಿಜಯ್ ಸರ್ಕಾರ ರಚಿಸಲು ಮಹತ್ವದ ಪಾತ್ರ ವಹಿಸಲಿಲ್ಲ. ಕೊನೆಗೆ ಬಿಜೆಪಿ ಸರ್ಕಾರ ರಚಿಸಿ ಮನೋಹರ್ ಪರ್ರಿಕರ್ ಮುಖ್ಯಮಂತ್ರಿಯಾಗಿ ಆಯ್ಕೆಯಾದರು. ಕರ್ನಾಟಕದಲ್ಲೂ ದಿಗ್ವಿಜಯ್ ವಿರುದ್ಧ ಹಲವು ಕಾಂಗ್ರೆಸ್ ನಾಯಕರು ಅಪಸ್ವರವೆತ್ತಿದ್ದರು.
ಕೇರಳದ ಅಲಪುಳಾ ಕ್ಷೇತ್ರದ ಸಂಸದರಾಗಿರುವ ಕೆ.ಸಿ. ವೇಣುಗೋಪಾಲ್ ಈ ಹಿಂದೆ ಯುಪಿಎ ಸರ್ಕಾರವಿದ್ದಾಗ ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.