
ಭೋಪಾಲ್[ಸೆ.11]: ಮೊಹರಂಗೆ ಶುಭಾಶಯ ಕೋರಿ ಟ್ವೀಟ್ ಮಾಡಿ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಪೇಚಿಗೆ ಸಿಲುಕಿದ್ದಾರೆ. ಮೊಹರಂರ ಈ ಶುಭ ಸಂದರ್ಭದಲ್ಲಿ ಎಲ್ಲಾ ಮುಸ್ಲಿಂ ಸೋದರ ಸೋದರಿಯರಿಗೆ ನಮ್ಮ ಸೆಲ್ಯೂಟ್ ಎಂದು ಸಿಂಗ್ ಟ್ವೀಟ್ ಮಾಡಿದ್ದರು.
ಅವರು ಬಳಸಿದ ಸೆಲ್ಯೂಟ್ ಪದ ಟೀಕೆಗೆ ಗುರಿಯಾಗಿದ್ದು, ಮೊಹರಂ ದುಃಖದ ದಿನವಾಗಿದ್ದು ಅದೂ ನಿಮಗೆ ಗೊತ್ತಿಲ್ಲವೇ ಎಂದು ಬಿಜೆಪಿ ನಾಯಕ ಶಹನವಾಜ್ ಹುಸೇನ್ ಪ್ರಶ್ನೆ ಮಾಡಿದ್ದಾರೆ.
7ನೇ ಶತಮಾನದ ಕರ್ಬಲಾ ಯುದ್ಧದಲ್ಲಿ ಮಡಿದ ಪೈಗಂಬರರ ಪೌತ್ರ ಹಝ್ರತ್ ಇಮಾಂ ಹುಸೈನ್ರವರ ನೆನಪಿಗಾಗಿ ಮೊಹರಂ ಆಚರಿಸಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.