
ಬೆಂಗಳೂರು: ಎಐಎಡಿಎಂಕೆ ಬಂಡಾಯ ನಾಯಕ ಟಿ.ಟಿ.ವಿ ದಿನಕರನ್ ಹಾಗೂ ಶಾಸಕ ಸ್ಥಾನದಿಂದ ಅನರ್ಹಗೊಂಡ 18 ಬಂಡಾಯ ಶಾಸಕರ ಪೈಕಿ ಕೆಲ ಶಾಸಕರು ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಗರದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪದಚ್ಯುತ ನಾಯಕಿ ವಿ.ಕೆ. ಶಶಿಕಲಾ ಅವರನ್ನು ಶುಕ್ರವಾರ ಭೇಟಿ ಮಾಡಿದರು.
‘ಈ ಸಂದರ್ಭದಲ್ಲಿ ಶಾಸಕರ ಅನರ್ಹ ಆದೇಶ ಎತ್ತಿಹಿಡಿದ ಹೈಕೋರ್ಟ್ ತೀರ್ಪು ಸೇರಿ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಚುನಾವಣೆ ಎದುರಿಸುವುದೇ ಸೂಕ್ತ ಎಂದು ಶಶಿಕಲಾ ಅವರು ಹೇಳಿದ್ದಾರೆ,’ ಎಂದು ಶಾಸಕ ಟಿ.ಟಿ.ವಿ ದಿನಕರನ್ ಹೇಳಿದ್ದಾರೆ.
ಶಾಸಕರ ಅನರ್ಹತೆಗೊಳಿಸಿದ ತಮಿಳುನಾಡು ವಿಧಾನಸಭೆ ಸ್ಪೀಕರ್ ಪಿ.ಧನಪಾಲ್ ಅವರ ಆದೇಶವನ್ನು ಮದ್ರಾಸ್ ಹೈಕೋರ್ಟ್ ಎತ್ತಿ ಹಿಡಿದಿತ್ತು. ಇದಾದ ಬಳಿಕ ಶಶಿಕಲಾ ಅವರನ್ನು ಮಾಜಿ ಶಾಸಕರು ಭೇಟಿ ಮಾಡಿದ್ದು ಇದೇ ಮೊದಲು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ