ನ್ಯಾಯಾಂಗ ಬಂಧನಕ್ಕೆ ಟಿಟಿವಿ ದಿನಕರನ್

Published : May 01, 2017, 11:33 AM ISTUpdated : Apr 11, 2018, 01:00 PM IST
ನ್ಯಾಯಾಂಗ ಬಂಧನಕ್ಕೆ ಟಿಟಿವಿ ದಿನಕರನ್

ಸಾರಾಂಶ

ಪೊಲೀಸರು ಈಗಾಗಾಲೇ ದಿನಕರನ್​ನನ್ನು​ ತಿಹಾರ್​ ಜೈಲಿಗೆ ಕರೆದೊಯ್ಯಿದ್ದಾರೆ. ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ದಿನಕರನ್​ ಪಕ್ಷದ ಎರಡೆಲೆ ಚಿಹ್ನೆಗಾಗಿ 50 ಕೋಟಿ ಹಣ ನೀಡಿರುವ ಆರೋಪ ಕೇಳಿಬಂದಿದ್ದು ದೆಹಲಿ ಪೊಲೀಸರು ಎಫ್'ಐಆರ್ ದಾಖಲಿಸಿದ್ದರು.

ನವದೆಹಲಿ (ಮೇ.01): ಎಐಎಡಿಎಂಕೆ ಪಕ್ಷದ ಎರಡೆಲೆ ಚಿಹ್ನೆಗಾಗಿ 50 ಕೋಟಿ ಲಂಚ ಪ್ರಕರಣ ಸಂಬಂಧ ಟಿಟಿವಿ ದಿನಕರನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಇವತ್ತಿಗೆ ಪೊಲೀಸ್ ಕಸ್ಟಡಿ ಮುಗಿದ ಕಾರಣ, ದೆಹಲಿಯ ತೀಸ್​ ಹಜಾರಿ ಕೋರ್ಟಿಗೆ ದಿನಕರನ್’ರನ್ನು ಹಾಜರುಪಡಿಸಲಾಯ್ತು. ಈ ವೇಳೆ ನ್ಯಾಯಾಧೀಶರು, ವಾದ-ಪ್ರತಿವಾದ ಆಲಿಸಿ ಮತ್ತೆ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ, ಹೀಗಾಗಿ ಮೇ 15ರವರೆಗೆ ಬಂಧನಕ್ಕೊಪ್ಪಿಸಲಾಗಿದೆ.

ಪೊಲೀಸರು ಈಗಾಗಾಲೇ ದಿನಕರನ್​ನನ್ನು​ ತಿಹಾರ್​ ಜೈಲಿಗೆ ಕರೆದೊಯ್ಯಿದ್ದಾರೆ. ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ದಿನಕರನ್​ ಪಕ್ಷದ ಎರಡೆಲೆ ಚಿಹ್ನೆಗಾಗಿ 50 ಕೋಟಿ ಹಣ ನೀಡಿರುವ ಆರೋಪ ಕೇಳಿಬಂದಿದ್ದು ದೆಹಲಿ ಪೊಲೀಸರು ಎಫ್'ಐಆರ್ ದಾಖಲಿಸಿದ್ದರು.

ಈ ಕೇಸಿನಲ್ಲಿ ಮಲ್ಲಿಕಾರ್ಜುನ್ ಮತ್ತು ಬೆಂಗಳೂರು ಮೂಲಕ ದಲ್ಲಾಳಿ ಸುಖೇಶ್ ಕೂಡ ಸದ್ಯ ಜೈಲಿನಲ್ಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಹಸ್ಯ ಡಿನ್ನರ್ ಮೀಟಿಂಗ್‌ನಲ್ಲಿ 'ಅಹಿಂದ' ಮಾಸ್ಟರ್ ಪ್ಲಾನ್! ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೆಳಗಾವಿಯಲ್ಲಿ ಹೊಸ ರಣತಂತ್ರ?
India News Live: ಅಣುವಲಯ ಇನ್ನು ಖಾಸಗಿಗೂ ಮುಕ್ತ : ‘ಶಾಂತಿ’ ಮಸೂದೆಗೆ ಅನುಮೋದನೆ