
ಬೆಂಗಳೂರು :ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಎರಡು ದಿನಗಳ ಬೆಂಗಳೂರು ಮಹಾನಗರ ವಿಪ್ರರ ಬೃಹತ್ ಸಮಾವೇಶ ನಡೆಯಿತು.
ಸಮಾವೇಶ ಉದ್ದೇಶಿಸಿ ಮಾತನಾಡುತ್ತಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಪೇಚಿಗೆ ಸಿಲುಕಿದ ಪ್ರಸಂಗ ಜರುಗಿತು. ಕಾಂಗ್ರೆಸ್ ಪಕ್ಷವು ಕಳೆದ ಬಾರಿಯ ವಿಧಾನಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದೆ. ಸಿದ್ದರಾಮಯ್ಯ ಅವರ ಸರ್ಕಾರ ನುಡಿದಂತೆ ನಡೆದಿದೆ ಎಂದು ಹೇಳುತ್ತಿದ್ದಂತೆ ಸಮಾವೇಶದಲ್ಲಿ ನೆರೆದಿದ್ದವರೆಲ್ಲರೂ ಇಲ್ಲ.... ಇಲ್ಲ... ಇಲ್ಲಿ ರಾಜಕೀಯ ಬೇಡ ಎಂದು ತೀವ್ರವಾಗಿ ಖಂಡಿಸಿದರು.
ಕೆಲ ನಿಮಿಷ ಕುಳಿತಿದ್ದವರು ಎದ್ದು ನಿಂತು ಕೂಗಾಡಿದರು. ಬಳಿಕ ಸಮಾಜದ ಅಧ್ಯಕ್ಷರು, ಅತಿಥಿಗಳಿಗೆ ಗೌರವ ನೀಡೋಣ ಹೀಗೆ ಮಾಡಬೇಡಿ ಎಂದು ಮನವಿ ಮಾಡಿದ್ದರಿಂದ ಕೂಗಾಟ ತಿಳಿಯಾಯಿತು.
ಮತ್ತೆ ಮಾತಿಗಿಳಿದ ದಿನೇಶ್ ಗುಂಡೂರಾವ್, ನನ್ನ ಮಾತಿನಿಂದ ಯಾರಿಗಾದರೂ ಬೇಜಾರಾಗಿದ್ದರೆ ಕ್ಷಮಿಸಿ ಎಂದು ಹೇಳಿ ಕುಳಿತರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.