
ತುಮಕೂರು: ಉತ್ತರ ಪ್ರದೇಶ ಮತ್ತು ಬಿಹಾರ ಉಪ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಿದೆ. ದೇಶದಲ್ಲಿ ಜನ ಬಿಜೆಪಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಮೋದಿ ಭಾಷಣ ಕೇಳೀ ಜನ ರೋಸಿ ಹೋಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ತುಮಕೂರಿನಲ್ಲಿ ವಾಗ್ದಾಳಿ ನಡೆಸಿದ್ದಾರೆ.
2017-18ರಲ್ಲಿ 10ಕ್ಕೂ ಹೆಚ್ಚು ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಖಚಿತವಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಬಂದು ಧ್ವೇಷದ ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು. ಅಮಿತ್ ಶಾ, ಮೋದಿ ಪ್ರಚೋದನಾ ಕಾರಿ ಭಾಷಣವನ್ನು, ಸುಳ್ಳಿನ ಆರೋಪ ಮಾಡುವುದನ್ನು ಮೊದಲು ನಿಲ್ಲಿಸಬೇಕು. ಕರ್ನಾಟಕದಲ್ಲಿ ಬಂದು ಮುಖ ತೋರಿಸಲು ನಿಮಗೆ ಯಾವುದೇ ರೀತಿಯಾದ ನೈತಿಕತೆ ಇಲ್ಲ ಎಂದು ಕಿಡಿಕಾರಿದ್ದಾರೆ.
ಅಲ್ಲದೇ ಇವಿಎಂ ಮಷಿನ್ ಬಗ್ಗೆ ಅಸಮಾಧಾನ ಹೊರ ಹಾಕಿದ ಅವರು ತಾಂತ್ರಿಕ ದೋಷ ಆಗದಂತೆ ಎಚ್ಚರ ವಹಿಸಬೇಕೆನ್ನುವುದು ನಮ್ಮ ಆಗ್ರಹ ಎಂದಿದ್ದಾರೆ. ಇನ್ನು ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆಗೆ ಬಿಜೆಪಿ ಮುಖಂಡರೇ ಕಾರಣರಾಗಿದ್ದಾರೆ. ಅನಂತ್ ಕುಮಾರ್ ಹೆಗಡೆ, ಶೋಭಾ ಕರಂದ್ಲಾಜೆ, ಅಮಿತ್ ಶಾ, ಹಿಂದುತ್ವದ ಅಜೆಂಡಾದ ಮೇಲೆ ಕೋಮು ಗಲಭೆಯನ್ನು ಸೃಷ್ಟಿ ಮಾಡುತ್ತಿದ್ದಾರೆ ಎಂದಿದ್ದಾರೆ.
ಇನ್ನು ಇದೇ ವೇಳೆ ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಮಾತನಾಡಿದ ಅವರು ನಮ್ಮ ಪಕ್ಷಕ್ಕೂ ಪ್ರತ್ಯೇಕ ಧರ್ಮಕ್ಕೂ ಸಂಬಂಧವಿಲ್ಲ ಎಂದು ಗುಂಡೂರಾವ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.