ಕುತೂಹಲದ ಬೆಳವಣಿಗೆ : ದಿನೇಶ್ ಗುಂಡೂರಾವ್ ಗೆ ಹೊಸ ಸಾರಥ್ಯ

Published : Jun 06, 2018, 09:30 AM IST
ಕುತೂಹಲದ ಬೆಳವಣಿಗೆ : ದಿನೇಶ್ ಗುಂಡೂರಾವ್ ಗೆ ಹೊಸ ಸಾರಥ್ಯ

ಸಾರಾಂಶ

ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ  ಕೆಪಿಸಿಸಿ ಸಾರಥ್ಯ ನೀಡಲು ಹೈಮಾಂಡ್ ಪರಿಗಣಿಸಿದ್ದು, ಶೀಘ್ರವೇ ಈ ಬಗ್ಗೆ ಘೋಷಣೆ ಹೊರಬೀಳಲಿದೆ ಎನ್ನಲಾಗಿದೆ.

ಬೆಂಗಳೂರು :  ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಪರಿಗಣಿಸಿದ್ದು, ಶೀಘ್ರವೇ ಈ ಬಗ್ಗೆ ಘೋಷಣೆ ಹೊರಬೀಳಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. 

ಡಿ.ಕೆ. ಶಿವಕುಮಾರ್, ಕೃಷ್ಣಬೈರೇಗೌಡ, ಎಂ.ಬಿ.ಪಾಟೀಲ್, ಬಿ.ಕೆ.ಹರಿಪ್ರಸಾದ್ ಹಾಗೂ ಕೆ.ಎಚ್.ಮುನಿಯಪ್ಪರಂತಹ ಘಟಾನು ಘಟಿಗಳು ಪೈಪೋಟಿ ನಡೆಸುತ್ತಿದ್ದ ಈ ಸ್ಥಾನ ಪಡೆದುಕೊಳ್ಳಲು ದಿನೇಶ್ ಯಶಸ್ವಿಯಾಗಿದ್ದಾರೆ ಎಂದು ಮೂಲಗಳು ಹೇಳಿವೆ. 

ಇದಕ್ಕೆ ಡಿಕೆಶಿ, ಕೃಷ್ಣಬೈರೇಗೌಡ, ಎಂ.ಬಿ.ಪಾಟೀಲ್ ಸಂಪುಟಕ್ಕೆ ಸೇರುತ್ತಿರುವುದು ಒಂದು ಕಾರಣವಾದರೆ, ಹರಿಪ್ರಸಾದ್ ಹಾಗೂ ಮುನಿಯಪ್ಪರಂತಹ ಹಿರಿಯರ ಬದಲು ಯುವಕರಿಗೆ ಈ ಸ್ಥಾನ ನೀಡಬೇಕು ಎಂಬ ಹೈಕಮಾಂಡ್ ಚಿಂತನೆಯ ಲಾಭ ದಿನೇಶ್ ಗುಂಡೂರಾವ್‌ಗೆ ದೊರಕಿದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾರತಹಳ್ಳಿ ಹೊಟೇಲ್ ಕಟ್ಟಡದಿಂದ ಯುವತಿ ಜಿಗಿತ ಪ್ರಕರಣ, ಪೊಲೀಸರ ಮೇಲೆ ಕಮಿಷನರ್‌ಗೆ ಮೂಡಿದ ಅನುಮಾನ?
ಜನ್ಮದಿನದಂದೇ ಹೆಚ್‌ಡಿಕೆ ತೋಳಿಗೆ ಬಂತು ದೈವಿ ಶಕ್ತಿ! 'ಶಿವ ತಾಯತ' ಕಟ್ಟಿದ ಬಿಜೆಪಿ ಕಾರ್ಯಕರ್ತರು!